ಚಾಮರಾಜನಗರ

ಹನೂರು: ತ.ನಾಡಿಗೆ ಸಾಗಿಸುತ್ತಿದ್ದ ಕರುಗಳ ರಕ್ಷಣೆ

 

ಹನೂರು: ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ವಿವಿಧ ತಳಿಯ ಕರುಗಳನ್ನು ಸಾಗಣೆ ಮಾಡುತ್ತಿದ್ದ ವೇಳೆ ರಾಮಾಪುರ ಪೊಲೀಸರು ದಾಳಿ ನಡೆಸಿ ಕರುಗಳನ್ನು ರಕ್ಷಣೆ ಮಾಡಿದ್ದಾರೆ.

ಹನೂರು ತಾಲೂಕಿನ ಎಲ್ಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ ನಾಗೇಶ್ (26) ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ: ಹನೂರು ಪಟ್ಟಣದಿಂದ ಅಜ್ಜೀಪುರ ಮಾರ್ಗವಾಗಿ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಕರುಗಳನ್ನು ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಮಪುರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಲೋಕೇಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಅಜ್ಜೀಪುರ ಸಮೀಪದ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಬರುತ್ತಿದ್ದ ಗೂಡ್ಸ್ ವಾಹನವನ್ನು ಪರಿಶೀಲನೆ ನಡೆಸಿದಾಗ ವಿವಿಧ ತಳಿಯ ಹಸುಗಳ ಹದಿಮೂರು ಗಂಡು ಕರುಗಳನ್ನು ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ನಂತರ ವಾಹನ ಸಮೇತ 50,000 ಮೌಲ್ಯದ 13 ಕರುಗಳನ್ನು ರಕ್ಷಿಸಿ ಮೈಸೂರು ಜಿಲ್ಲೆ ಟಿ.ನರಸೀಪುರ ಸಮೀಪ ಕುರುಬೂರು ಗ್ರಾಮದ ಗೋಶಾಲೆಗೆ ಕರುಗಳನ್ನು ಬಿಡಲಾಗಿದೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕ 2020ರ ಅಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ದಾಳಿಯಲ್ಲಿ ಎ ಎಸ್ ಐ ಗುರುಸ್ವಾಮಿ, ಮುಖ್ಯಪೇದೆಗಳಾದ ಚಂದ್ರಶೇಖರ್, ರಂಗಸ್ವಾಮಿ, ಪೇದೆ ಮಹೇಂದ್ರ, ಚಾಲಕ ಶಂಕರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

5 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago