ಚಾಮರಾಜನಗರ

ಹನೂರು: ತ.ನಾಡಿಗೆ ಸಾಗಿಸುತ್ತಿದ್ದ ಕರುಗಳ ರಕ್ಷಣೆ

 

ಹನೂರು: ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ವಿವಿಧ ತಳಿಯ ಕರುಗಳನ್ನು ಸಾಗಣೆ ಮಾಡುತ್ತಿದ್ದ ವೇಳೆ ರಾಮಾಪುರ ಪೊಲೀಸರು ದಾಳಿ ನಡೆಸಿ ಕರುಗಳನ್ನು ರಕ್ಷಣೆ ಮಾಡಿದ್ದಾರೆ.

ಹನೂರು ತಾಲೂಕಿನ ಎಲ್ಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ ನಾಗೇಶ್ (26) ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ: ಹನೂರು ಪಟ್ಟಣದಿಂದ ಅಜ್ಜೀಪುರ ಮಾರ್ಗವಾಗಿ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಕರುಗಳನ್ನು ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಮಪುರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಲೋಕೇಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಅಜ್ಜೀಪುರ ಸಮೀಪದ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಬರುತ್ತಿದ್ದ ಗೂಡ್ಸ್ ವಾಹನವನ್ನು ಪರಿಶೀಲನೆ ನಡೆಸಿದಾಗ ವಿವಿಧ ತಳಿಯ ಹಸುಗಳ ಹದಿಮೂರು ಗಂಡು ಕರುಗಳನ್ನು ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ನಂತರ ವಾಹನ ಸಮೇತ 50,000 ಮೌಲ್ಯದ 13 ಕರುಗಳನ್ನು ರಕ್ಷಿಸಿ ಮೈಸೂರು ಜಿಲ್ಲೆ ಟಿ.ನರಸೀಪುರ ಸಮೀಪ ಕುರುಬೂರು ಗ್ರಾಮದ ಗೋಶಾಲೆಗೆ ಕರುಗಳನ್ನು ಬಿಡಲಾಗಿದೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕ 2020ರ ಅಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ದಾಳಿಯಲ್ಲಿ ಎ ಎಸ್ ಐ ಗುರುಸ್ವಾಮಿ, ಮುಖ್ಯಪೇದೆಗಳಾದ ಚಂದ್ರಶೇಖರ್, ರಂಗಸ್ವಾಮಿ, ಪೇದೆ ಮಹೇಂದ್ರ, ಚಾಲಕ ಶಂಕರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

22 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

28 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

32 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago