ಹನೂರು: ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ವಿವಿಧ ತಳಿಯ ಕರುಗಳನ್ನು ಸಾಗಣೆ ಮಾಡುತ್ತಿದ್ದ ವೇಳೆ ರಾಮಾಪುರ ಪೊಲೀಸರು ದಾಳಿ ನಡೆಸಿ ಕರುಗಳನ್ನು ರಕ್ಷಣೆ ಮಾಡಿದ್ದಾರೆ.
ಹನೂರು ತಾಲೂಕಿನ ಎಲ್ಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ ನಾಗೇಶ್ (26) ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ: ಹನೂರು ಪಟ್ಟಣದಿಂದ ಅಜ್ಜೀಪುರ ಮಾರ್ಗವಾಗಿ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಕರುಗಳನ್ನು ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಮಪುರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಲೋಕೇಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಅಜ್ಜೀಪುರ ಸಮೀಪದ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಬರುತ್ತಿದ್ದ ಗೂಡ್ಸ್ ವಾಹನವನ್ನು ಪರಿಶೀಲನೆ ನಡೆಸಿದಾಗ ವಿವಿಧ ತಳಿಯ ಹಸುಗಳ ಹದಿಮೂರು ಗಂಡು ಕರುಗಳನ್ನು ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ನಂತರ ವಾಹನ ಸಮೇತ 50,000 ಮೌಲ್ಯದ 13 ಕರುಗಳನ್ನು ರಕ್ಷಿಸಿ ಮೈಸೂರು ಜಿಲ್ಲೆ ಟಿ.ನರಸೀಪುರ ಸಮೀಪ ಕುರುಬೂರು ಗ್ರಾಮದ ಗೋಶಾಲೆಗೆ ಕರುಗಳನ್ನು ಬಿಡಲಾಗಿದೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕ 2020ರ ಅಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ದಾಳಿಯಲ್ಲಿ ಎ ಎಸ್ ಐ ಗುರುಸ್ವಾಮಿ, ಮುಖ್ಯಪೇದೆಗಳಾದ ಚಂದ್ರಶೇಖರ್, ರಂಗಸ್ವಾಮಿ, ಪೇದೆ ಮಹೇಂದ್ರ, ಚಾಲಕ ಶಂಕರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…