ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ ನಡೆಸಲಾಯಿತು.
ಎಸ್ಪಿ ಎಂ.ಮುತ್ತುರಾಜು ಮಾತನಾಡಿ, ಹಬ್ಬ ಎಂಬುದು ಎಲ್ಲರೂ ಸೇರಿ ಸಂತೋಷದಿಂದ ಆಚರಿಸುವಂಥದ್ದು. ಈ ಸಂದರ್ಭದಲ್ಲಿ ಐಕ್ಯತೆ, ಸಹೋದರತೆ ಇರಬೇಕು. ಇನ್ನೊಬ್ಬರಿಗೆ ಯಾರೂ ತೊಂದರೆ ಕೊಡಬಾರದು. ಎಲ್ಲರೂ ಪರಸ್ಪರ ಪ್ರೀತಿ, ಗೌರವದಿಂದ ಇದ್ದು ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದರು.
ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಯುಗಾದಿ ಹಾಗೂ ರಂಜಾನ್ ಹಬ್ಬವನ್ನು ಜಿಲ್ಲೆಯಲ್ಲಿ ಎಂದಿನಂತೆ ಸೌಹಾರ್ದ ಹಾಗೂ ಸಾಮರಸ್ಯದಿಂದ ಆಚರಿಸುವಂತೆ ಹೇಳಿದರು.
ಜಿಲ್ಲೆಯಲ್ಲಿ ಈ ಹಿಂದಿನಿಂದಲೂ ಎಲ್ಲ ಕೋಮು, ಧರ್ಮಗಳ ಹಬ್ಬವನ್ನು ಶಾಂತಿ ಸೌಹಾರ್ದಯುತವಾಗಿ ಆಚರಿಸಿಕೊಂಡು ಬಂದಿರುವ ಸಂಪ್ರದಾಯವಿದ್ದು, ಈ ಉತ್ತಮ ನಡೆ ಹೀಗೆಯೇ ಮುಂದುವರೆಯಲಿ ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕೋಮುಗಳ ಮುಖಂಡರು ಮಾತನಾಡಿ, ಎಲ್ಲರೂ ಪರಸ್ಪರ ಗೌರವ, ಶಾಂತಿ ಪ್ರೀತಿಯಿಂದ ಈ ಹಬ್ಬಗಳನ್ನು ಆಚರಿಸುತ್ತೇವೆ. ಹಬ್ಬದ ವೇಳೆ ಕುಡಿಯುವ ನೀರು, ಸ್ವಚ್ಚತೆಗೆ ವಿಶೇಷ ವ್ಯವಸ್ಥೆ ಮಾಡಿಸುವಂತೆ ಮನವಿ ಮಾಡಿದರು. ಈ ಅನುಕೂಲ ಕಲ್ಪಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.
ಡಿವೈಎಸ್ಪಿ ಸ್ನೇಹರಾಜು, ನಗರಸಭೆ ಆಯುಕ್ತ ಪರಶುರಾಮ ಛಲವಾದಿ, ವಿವಿಧ ಕೋಮುಗಳ ಮುಖಂಡರು, ಸಂಘಟನೆಗಳ ಮುಖ್ಯಸ್ಥರು, ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿರಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…