ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ ನಡೆಸಲಾಯಿತು.
ಎಸ್ಪಿ ಎಂ.ಮುತ್ತುರಾಜು ಮಾತನಾಡಿ, ಹಬ್ಬ ಎಂಬುದು ಎಲ್ಲರೂ ಸೇರಿ ಸಂತೋಷದಿಂದ ಆಚರಿಸುವಂಥದ್ದು. ಈ ಸಂದರ್ಭದಲ್ಲಿ ಐಕ್ಯತೆ, ಸಹೋದರತೆ ಇರಬೇಕು. ಇನ್ನೊಬ್ಬರಿಗೆ ಯಾರೂ ತೊಂದರೆ ಕೊಡಬಾರದು. ಎಲ್ಲರೂ ಪರಸ್ಪರ ಪ್ರೀತಿ, ಗೌರವದಿಂದ ಇದ್ದು ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದರು.
ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಯುಗಾದಿ ಹಾಗೂ ರಂಜಾನ್ ಹಬ್ಬವನ್ನು ಜಿಲ್ಲೆಯಲ್ಲಿ ಎಂದಿನಂತೆ ಸೌಹಾರ್ದ ಹಾಗೂ ಸಾಮರಸ್ಯದಿಂದ ಆಚರಿಸುವಂತೆ ಹೇಳಿದರು.
ಜಿಲ್ಲೆಯಲ್ಲಿ ಈ ಹಿಂದಿನಿಂದಲೂ ಎಲ್ಲ ಕೋಮು, ಧರ್ಮಗಳ ಹಬ್ಬವನ್ನು ಶಾಂತಿ ಸೌಹಾರ್ದಯುತವಾಗಿ ಆಚರಿಸಿಕೊಂಡು ಬಂದಿರುವ ಸಂಪ್ರದಾಯವಿದ್ದು, ಈ ಉತ್ತಮ ನಡೆ ಹೀಗೆಯೇ ಮುಂದುವರೆಯಲಿ ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕೋಮುಗಳ ಮುಖಂಡರು ಮಾತನಾಡಿ, ಎಲ್ಲರೂ ಪರಸ್ಪರ ಗೌರವ, ಶಾಂತಿ ಪ್ರೀತಿಯಿಂದ ಈ ಹಬ್ಬಗಳನ್ನು ಆಚರಿಸುತ್ತೇವೆ. ಹಬ್ಬದ ವೇಳೆ ಕುಡಿಯುವ ನೀರು, ಸ್ವಚ್ಚತೆಗೆ ವಿಶೇಷ ವ್ಯವಸ್ಥೆ ಮಾಡಿಸುವಂತೆ ಮನವಿ ಮಾಡಿದರು. ಈ ಅನುಕೂಲ ಕಲ್ಪಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.
ಡಿವೈಎಸ್ಪಿ ಸ್ನೇಹರಾಜು, ನಗರಸಭೆ ಆಯುಕ್ತ ಪರಶುರಾಮ ಛಲವಾದಿ, ವಿವಿಧ ಕೋಮುಗಳ ಮುಖಂಡರು, ಸಂಘಟನೆಗಳ ಮುಖ್ಯಸ್ಥರು, ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿರಿದ್ದರು.
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…