ಚಾಮರಾಜನಗರ: ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಅಪರಾಧಿಗೆ 4 ವರ್ಷ ಜೈಲು ಮತ್ತು 5,000 ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದ ಕಾರ್ತಿಕ್ ಶಿಕ್ಷೆಗೆ ಗುರಿಯಾದ ಆರೋಪಿ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತ್ ಅವರು ಈ ತೀರ್ಪು ಪ್ರಕಟಿಸಿದ್ದಾರೆ.
ಘಟನೆ ಹಿನ್ನಲೆ:
ಕ್ಲೀನರ್ ಆಗಿದ್ದ ಆರೋಪಿ ಕಾರ್ತಿಕ್ ಆ.26/2019ರಂದು ಸಂಜೆ ಸಮಯ ಕೊಳ್ಳೇಗಾಲ ಪಟ್ಟಣದ ಜೆಎಸ್ಎಸ್ ಕಾಲೇಜ್ ಸೇತುವೆ ಬಳಿ ಜಯಲಕ್ಷ್ಮಿ ಎಂಬುವವರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಹಲ್ಲೆ ನಡೆಸಿ ಕೊಲೆ ಮಾಡಲು ಪ್ರಯತ್ನಿಸುದ್ದನು.
ಪ್ರಕರಣ ಸಂಬಂಧ ಕೊಳ್ಳೇಗಾಲ ಪೊಲೀಸ್ ಠಾಣೆಯ ಪಿಎಸ್ಐ ಜೆ.ರಾಜೇಂದ್ರ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.
ಅದರಂತೆ ವಿಚಾರಣೆ ನಡೆಸಿ, ನ್ಯಾಯಾಲಯವು ಈ ಪ್ರಕರಣದಲ್ಲಿ ಆರೋಪ ಸಾಬಿತಾದ ಕಾರಣ ಆರೋಪಿ ಕಾರ್ತಿಕ್ಗೆ ಐಪಿಸಿ ಕಲಂ 354(ಎ) 307ರಡಿ ಶಿಕ್ಷೆ ವಿಧಿಸಿದ್ದು, 4 ವರ್ಷಗಳ ಜೈಲು ಶಿಕ್ಷೆ ಮತ್ತು 5,000 ದಂಡ ವಿಧಿಸ ಆದೇಶ ಹೊರಡಿಸದೆ.





