ಚಾಮರಾಜನಗರ

ಅತ್ಯಾಚಾರ ಪ್ರಕರಣ: ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ಚಾಮರಾಜನಗರ: ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಅಪರಾಧಿಗೆ 4 ವರ್ಷ ಜೈಲು ಮತ್ತು 5,000 ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದ ಕಾರ್ತಿಕ್‌ ಶಿಕ್ಷೆಗೆ ಗುರಿಯಾದ ಆರೋಪಿ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತ್‌ ಅವರು ಈ ತೀರ್ಪು ಪ್ರಕಟಿಸಿದ್ದಾರೆ.

ಘಟನೆ ಹಿನ್ನಲೆ:

ಕ್ಲೀನರ್‌ ಆಗಿದ್ದ ಆರೋಪಿ ಕಾರ್ತಿಕ್‌ ಆ.26/2019ರಂದು ಸಂಜೆ ಸಮಯ ಕೊಳ್ಳೇಗಾಲ ಪಟ್ಟಣದ ಜೆಎಸ್ಎಸ್‌ ಕಾಲೇಜ್‌ ಸೇತುವೆ ಬಳಿ ಜಯಲಕ್ಷ್ಮಿ ಎಂಬುವವರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಹಲ್ಲೆ ನಡೆಸಿ ಕೊಲೆ ಮಾಡಲು ಪ್ರಯತ್ನಿಸುದ್ದನು.

ಪ್ರಕರಣ ಸಂಬಂಧ ಕೊಳ್ಳೇಗಾಲ ಪೊಲೀಸ್‌ ಠಾಣೆಯ ಪಿಎಸ್‌ಐ ಜೆ.ರಾಜೇಂದ್ರ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.

ಅದರಂತೆ ವಿಚಾರಣೆ ನಡೆಸಿ, ನ್ಯಾಯಾಲಯವು ಈ ಪ್ರಕರಣದಲ್ಲಿ ಆರೋಪ ಸಾಬಿತಾದ ಕಾರಣ ಆರೋಪಿ ಕಾರ್ತಿಕ್‌ಗೆ ಐಪಿಸಿ ಕಲಂ 354(ಎ) 307ರಡಿ ಶಿಕ್ಷೆ ವಿಧಿಸಿದ್ದು, 4 ವರ್ಷಗಳ ಜೈಲು ಶಿಕ್ಷೆ ಮತ್ತು 5,000 ದಂಡ ವಿಧಿಸ ಆದೇಶ ಹೊರಡಿಸದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago