ಚಾಮರಾಜನಗರ

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ ಯಂತ್ರದ ಚಾಲಕನ ವಿರುದ್ಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಟಾಚಿ ಚಾಲಕ ಮುಕೇಶ್ ಹಾಗೂ ರೀಲ್ಸ್ ಮಾಡಿದ್ದ ಮಹಿಳೆಯ ಮೇಲೆ ಪ್ರಕರಣ ದಾಖಲಾಗಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೀಪದ ಗಿರಿ ವಡ್ಡುವಿನಲ್ಲಿ 108 ಅಡಿ ಮಹದೇಶ್ವರ ಪ್ರತಿಮೆ ಸ್ಥಾಪಿಸಿ ತಳಭಾಗದಲ್ಲಿ ಮಹದೇಶ್ವರರ ಜೀವನ ಚರಿತ್ರೆಯುಳ್ಳ ಮ್ಯೂಸಿಯಂ ನಿರ್ಮಾಣ ಮಾಡಲಾಗಿದೆ. ಪ್ರತಿಮೆ ಸ್ಥಳದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.

ಆದರೆ ಓರ್ವ ಮಹಿಳೆ ಅಕ್ರಮ ಪ್ರವೇಶ ಮಾಡಿ ಹಿಟಾಚಿಯ ಬಕೆಟ್‌ನಲ್ಲಿ ಕುಳಿತು ಮಹದೇಶ್ವರನ ದರ್ಶನ ಪಡೆಯುವಂತೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದರು.

ಈ ಬಗ್ಗೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಮಹಿಳೆಯ ವಿರುದ್ಧ ಆಕ್ರೋಶ ಹೂರ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟದ ಸಬ್ ಇನ್ಸ್‌ಪೆಕ್ಟರ್ ಜಯರಾಮುರವರ ದೂರಿನ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

16 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

16 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

16 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

16 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

16 hours ago