ಚಾಮರಾಜನಗರ : ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿಣ ಮಂಡಳಿ ವ್ಯಾಪ್ತಿಗೆ ಸೇರಿಸಲು ಕೋರಿ ಇಲ್ಲಿನ ಲೋಕಾಸಭಾ ಸದಸ್ಯ ಸುನೀಲ್ ಬೋಸ್ ಸೋಮವಾರ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ರಾಜ್ಯದಲ್ಲಿ ಚಾಮರಾಜನಗರ ಜಿಲ್ಲೆಯು ಅರಿಶಿನ ಬೆಳೆಯುವಲ್ಲಿ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯವು ದೇಶದಲ್ಲಿ ಅರಿಶಿನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ.
ಸುಮಾರು 8260 ಹೆಕ್ಟೇರ್ ಪ್ರದೇಶದಲ್ಲಿ ಅರಿಶಿನ ಬೆಳೆಯನ್ನು ಬೆಳೆಯಲಾಗುತ್ತಿದ್ದು, ಅಂದಾಜು 49,564.80 ಮೆಟ್ರಿಕ್ ಟನ್ ಗಳಷ್ಟು ಅರಿಶಿಣ ಉತ್ಪಾದನೆ ಆಗುತ್ತಿದೆ, ಇದು ದೇಶದ ಶೇ. 4.2ರಷ್ಟು ಹಾಗೂ ರಾಜ್ಯದ ಶೇ.38.3ರಷ್ಟು. ಇಷ್ಟು ಉತ್ಪಾದನೆಯಿರುವ ಜಿಲ್ಲೆಯ ರೈತರಿಗೆ ಸೂಕ್ತ ಮಾರುಕಟ್ಟೆ ಸೌಕರ್ಯವಿಲ್ಲ, ಅರಿಸಿನ ಮೌಲ್ಯವರ್ಧನ ಚಟುವಟಿಕೆಗಳಿಗೆ ಅವಕಾಶವಿಲ್ಲಾ, ಬೆಳೆ ಇಳುವರಿ ಹೆಚ್ಚಿಸುವ ತಂತ್ರಜ್ಞಾನದ ಕೊರತೆ ಇದೆ, ಸಮರ್ಪಕ ಗೊಬ್ಬರ ಮತ್ತು ಕೀಟನಾಶಕ ಸಮರ್ಪಕ ಬಳಕೆ ಕುರಿತ ಮಾರ್ಗದರ್ಶನವಿಲ್ಲ, ಆದರು ಕೂಡ ದೇಶದ ಅರಿಶಿನ ಉತ್ಪಾದನೆಯಲ್ಲಿ ಚಾಮರಾಜನಗರದ ಕೊಡುಗೆ ಶೇಕಡ 4.2 ರಷ್ಟಿದೆ. ಚಾಮರಾಜನಗರ ಜಿಲ್ಲೆಯ ರೈತರಿಗೆ ಅರಿಶಿನ ಬೆಲೆಗೆ ಸಂಬಂಧಿಸಿದಂತೆ ನಾವಿನ್ಯ ತಂತ್ರಜ್ಞಾನಗಳ ಕೊರತೆ ಇದ್ದು ಹಾಗೂ ವೈಜ್ಞಾನಿಕ ಬೆಳೆ ಪದ್ಧತಿ ಬಗ್ಗೆ ಅರಿವಿನ ಕೊರತೆ ಇದೆ ಆದ್ದರಿಂದ ರಾಷ್ಟ್ರೀಯ ಅರಿಶಿನ ಮಂಡಳಿ ಕಾರ್ಯ ಚಟುವಟಿಕೆಗಳನ್ನು ಚಾಮರಾಜನಗರ ಜಿಲ್ಲೆಗೆ ವಿಸ್ತರಿಸುವುದರಿಂದ ಈ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗಿ ರೈತರ ಆದಾಯದಲ್ಲಿ ಸುಧಾರಣೆ ಆಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…