ಚಾಮರಾಜನಗರ

ಸಂಸದ ಸುನಿಲ್ ಬೋಸ್ ಮನವಿಗೆ ಸ್ಪಂದನೆ: ಹನೂರು ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ 490 ಕೋಟಿ ಘೋಷಣೆ!

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು, ಉಡುತೊರೆಹಳ್ಳ ಯೋಜನೆಯಡಿ 490 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದೆ.

ಚಾಮರಾಜನಗರ ಸಂಸದ ಸುನಿಲ್ ಬೋಸ್ ಅವರು ಲೋಕಸಭಾ ಚುನಾವಣಾ ಸಮಯದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರು, ಕೌದಳ್ಳಿ, ಮಾರ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸದರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಸ್ಥರು ಮತ್ತು ವಿವಿಧ ಸಂಘಟನೆಗಳು ಕುಡಿಯುವ ನೀರಿಗೆ ತೊಂದರೆ ಇರುವ ಬಗ್ಗೆ ಮತ್ತು ಅಂತರ್ಜಲ ಮಟ್ಟವು ವ್ಯಾಪಕವಾಗಿ ಕುಸಿದಿರುವ ಬಗ್ಗೆ ಜನರಿಂದ ವ್ಯಾಪಕವಾದ ಮನವಿ ಬಂದಿದ್ದ ಹಿನ್ನಲೆಯಲ್ಲಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲೇಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು.

ಜೊತೆಗೆ ಹನೂರು ಭಾಗದಲ್ಲಿ ನೀರಾವರಿ ಸಮಸ್ಯೆಯಿಂದ ಉಂಟಾಗಿರುವ ಸಾಮಾಜಿಕ ಮತ್ತು ಆರ್ಥಿಕ ತೊಂದರೆಯ ಬಗ್ಗೆಯೂ ಸಹ ಮಾನ್ಯ ಸಂಸದರು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು.

ಈ ಮನವಿಗೆ ಪೂರಕವಾಗಿ ಇದೀಗ ಕುರಟ್ಟಿ ಹೊಸೂರು, ಕೌದಳ್ಳಿ, ಮಾರ್ಟಳ್ಳಿ ಸೇರಿದಂತೆ ಹನೂರು ತಾಲ್ಲೂಕಿನ ಸುಮಾರು 9 ಗ್ರಾಮ ಪಂಚಾಯತಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಈ ಭಾಗದ ಕೆರೆಗಳು ಮತ್ತು ಚೆಕ್ ಡ್ಯಾಂ ಅನ್ನು ತುಂಬಿಸುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಉಡುತೊರೆಹಳ್ಳ ಯೋಜನೆಯನ್ನು ಘೋಷಣೆ ಮಾಡಿದ್ದು ಈ ಯೋಜನೆಗಾಗಿ 490 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದಾರೆ.

ಈ ಐತಿಹಾಸಿಕವಾದ ನಿರ್ಧಾರದಿಂದ ಹನೂರು ತಾಲ್ಲೂಕಿನ ರೈತರು ಮತ್ತು ಜನ ಸಾಮಾನ್ಯರಿಗೆ ಅನುಕೂಲ ಆಗಲಿದ್ದು, ಇಂತಹ ಮಹತ್ವದ ಯೋಜನೆಯು ಜಾರಿಯಾಗಲು ವ್ಯವಸ್ಥಿತವಾಗಿ ಶ್ರಮಿಸಿದ ಮಾನ್ಯ ಚಾಮರಾಜನಗರ ಸಂಸದರಾದ ಸುನಿಲ್ ಬೋಸ್ ಅವರಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago