ಯಳಂದೂರು: ತಾಲ್ಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವ ರೈತ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಚಾಮರಾಜನಗರ ತಾಲ್ಲೂಕಿನ ಉಮ್ಮತ್ತೂರು ಗ್ರಾಮದಿಂದ ಬೆಳೆದ ಟೊಮ್ಯಾಟೊವನ್ನು ಗೂಡ್ಸ್ ಆಟೋದಲ್ಲಿ ಇವರು ತುಂಬಿಕೊಂಡು ಕೊಳ್ಳೇಗಾಲಕ್ಕೆ ಸಾಗಿಸುತ್ತಿದ್ದರು. ಬೆಳಗಿನ ಜಾವ ರಸ್ತೆಯಲ್ಲಿ ಕಬ್ಬು ತುಂಬಿಸಲು ನಿಂತಿದ್ದ ಲಾರಿಗೆ ಚಾಲಕ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದ ಮುಂದೆ ಕುಳಿತಿದ್ದ ಟೊಮ್ಯಾಟೊ ಬೆಳೆದಿದ್ದ ಅಗ್ರಹಾರ ಗ್ರಾಮದ ನಿತಿನ್ಕುಮಾರ್ (೧೬) ಹಾಗೂ ಉಮ್ಮತ್ತೂರು ಗ್ರಾಮದ ಸುಮಂತ್(೨೨) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಟೋ ಗುದ್ದಿದ ರಭಸಕ್ಕೆ ಆಟೋದ ಅರ್ಧ ಭಾಗ ಕಬ್ಬಿನ ಲಾರಿ ಒಳಗೆ ಸಿಲುಕಿಕೊಂಡಿದೆ. ಸ್ಥಳಕ್ಕೆ ಆಗಮಿಸಿ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಇವರಿಬ್ಬರ ಕಳೇಬರಗಳನ್ನು ಹೊರಕ್ಕೆತ್ತಲು ಹರಸಾಹಸ ಮಾಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ.
ಈ ಸಂಬಂಧ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…