ಯಳಂದೂರು: ತಾಲ್ಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವ ರೈತ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಚಾಮರಾಜನಗರ ತಾಲ್ಲೂಕಿನ ಉಮ್ಮತ್ತೂರು ಗ್ರಾಮದಿಂದ ಬೆಳೆದ ಟೊಮ್ಯಾಟೊವನ್ನು ಗೂಡ್ಸ್ ಆಟೋದಲ್ಲಿ ಇವರು ತುಂಬಿಕೊಂಡು ಕೊಳ್ಳೇಗಾಲಕ್ಕೆ ಸಾಗಿಸುತ್ತಿದ್ದರು. ಬೆಳಗಿನ ಜಾವ ರಸ್ತೆಯಲ್ಲಿ ಕಬ್ಬು ತುಂಬಿಸಲು ನಿಂತಿದ್ದ ಲಾರಿಗೆ ಚಾಲಕ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದ ಮುಂದೆ ಕುಳಿತಿದ್ದ ಟೊಮ್ಯಾಟೊ ಬೆಳೆದಿದ್ದ ಅಗ್ರಹಾರ ಗ್ರಾಮದ ನಿತಿನ್ಕುಮಾರ್ (೧೬) ಹಾಗೂ ಉಮ್ಮತ್ತೂರು ಗ್ರಾಮದ ಸುಮಂತ್(೨೨) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಟೋ ಗುದ್ದಿದ ರಭಸಕ್ಕೆ ಆಟೋದ ಅರ್ಧ ಭಾಗ ಕಬ್ಬಿನ ಲಾರಿ ಒಳಗೆ ಸಿಲುಕಿಕೊಂಡಿದೆ. ಸ್ಥಳಕ್ಕೆ ಆಗಮಿಸಿ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಇವರಿಬ್ಬರ ಕಳೇಬರಗಳನ್ನು ಹೊರಕ್ಕೆತ್ತಲು ಹರಸಾಹಸ ಮಾಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ.
ಈ ಸಂಬಂಧ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…