Road accident: Youth dies in Chamarajanagar
ಚಾಮರಾಜನಗರ : ತಾಲ್ಲೂಕಿನ ಕಡುವಿನಕಟ್ಟೆ ಹುಂಡಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟಿದ್ದಾನೆ.
ನಗರದ ರಾಮಸಮುದ್ರ ಬಡಾವಣೆಯ ಸಂತೋಷ್ (25) ಮೃತರು. ಇವರು ತೆರಕಣಾಂಬಿಯ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಶುಕ್ರವಾರ ರಾತ್ರಿ ಸಂತೋಷ್ ಬೈಕ್ನಲ್ಲಿ ಗುಂಡ್ಲುಪೇಟೆ-ಚಾ.ನಗರ ರಸ್ತೆಯಲ್ಲಿ ಬರುವಾಗ ಕಡುವಿನಕಟ್ಟೆ ಹುಂಡಿ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಸಂತೋಷ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಗರ ಸಂಚಾರ ಠಾಣೆಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಹೊರವಲಯದ ಸಿಮ್ಸ್ ಬೋಧನಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…
ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…
ಚಿಕ್ಕಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ…
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…