ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿಗೆ ಸಂಪರ್ಕ ಕಷ್ಟವಾಗಿದೆ. ಮರಳಾಪುರದಲ್ಲಿ ಭಾರೀ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದ್ದು, ಈ ದೃಶ್ಯಗಳನ್ನು ನೆಟ್ಟಿಗರೊಬ್ಬರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇನ್ನು ಹಾಲಹಳ್ಳಿ ಹಾಗೂ ತೊಂಡವಾಡಿ ಸಂಪರ್ಕಿಸುವ ರಸ್ತೆ ಮುಳುಗಡೆಯಾಗಿದ್ದು, ಸಂಚಾರ ಬಂದಾಗಿದೆ. ಮೈಸೂರು – ಊಟಿ ರಸ್ತೆಯಲ್ಲಿರುವ ಹಿರಿಕಾಟಿ ಗೇಟ್ನಲ್ಲಿಯೂ ಸಹ ನೀರು ಹರಿದಿದ್ದು, ವಾಹನ ಸಂಚಾರ ತೀರ ಕಷ್ಟಸಾಧ್ಯವಾಗಿದೆ.
ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಭಾರೀ ಮಳೆಗೆ ದೇವರಕೆರೆ ಹಾಗೂ ಅಗಸನಕಟ್ಟೆ ತುಂಬಿ ಏರಿ ಮೇಲೆ ನೀರು ಹರಿದಿದ್ದು, ಕೋಡಿ ಸರಿ ಇಲ್ಲದ ಕಾರಣ ಕೆರೆ ಒಡೆಯುವ ಭೀತಿ ಎದುರಾಗಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…