ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿಗೆ ಸಂಪರ್ಕ ಕಷ್ಟವಾಗಿದೆ. ಮರಳಾಪುರದಲ್ಲಿ ಭಾರೀ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದ್ದು, ಈ ದೃಶ್ಯಗಳನ್ನು ನೆಟ್ಟಿಗರೊಬ್ಬರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇನ್ನು ಹಾಲಹಳ್ಳಿ ಹಾಗೂ ತೊಂಡವಾಡಿ ಸಂಪರ್ಕಿಸುವ ರಸ್ತೆ ಮುಳುಗಡೆಯಾಗಿದ್ದು, ಸಂಚಾರ ಬಂದಾಗಿದೆ. ಮೈಸೂರು – ಊಟಿ ರಸ್ತೆಯಲ್ಲಿರುವ ಹಿರಿಕಾಟಿ ಗೇಟ್ನಲ್ಲಿಯೂ ಸಹ ನೀರು ಹರಿದಿದ್ದು, ವಾಹನ ಸಂಚಾರ ತೀರ ಕಷ್ಟಸಾಧ್ಯವಾಗಿದೆ.
ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಭಾರೀ ಮಳೆಗೆ ದೇವರಕೆರೆ ಹಾಗೂ ಅಗಸನಕಟ್ಟೆ ತುಂಬಿ ಏರಿ ಮೇಲೆ ನೀರು ಹರಿದಿದ್ದು, ಕೋಡಿ ಸರಿ ಇಲ್ಲದ ಕಾರಣ ಕೆರೆ ಒಡೆಯುವ ಭೀತಿ ಎದುರಾಗಿದೆ.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…