ಚಾಮರಾಜನಗರ

ಮುಂಗಾರು ಅಬ್ಬರ: ಗುಂಡ್ಲುಪೇಟೆಯ ಕೆಲವೆಡೆ ರಸ್ತೆ, ಜಮೀನು ಜಲಾವೃತ

ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್‌ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿಗೆ ಸಂಪರ್ಕ ಕಷ್ಟವಾಗಿದೆ. ಮರಳಾಪುರದಲ್ಲಿ ಭಾರೀ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದ್ದು, ಈ ದೃಶ್ಯಗಳನ್ನು ನೆಟ್ಟಿಗರೊಬ್ಬರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ಹಾಲಹಳ್ಳಿ ಹಾಗೂ ತೊಂಡವಾಡಿ ಸಂಪರ್ಕಿಸುವ ರಸ್ತೆ ಮುಳುಗಡೆಯಾಗಿದ್ದು, ಸಂಚಾರ ಬಂದಾಗಿದೆ. ಮೈಸೂರು – ಊಟಿ ರಸ್ತೆಯಲ್ಲಿರುವ ಹಿರಿಕಾಟಿ ಗೇಟ್‌ನಲ್ಲಿಯೂ ಸಹ ನೀರು ಹರಿದಿದ್ದು, ವಾಹನ ಸಂಚಾರ ತೀರ ಕಷ್ಟಸಾಧ್ಯವಾಗಿದೆ.

ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಭಾರೀ ಮಳೆಗೆ ದೇವರಕೆರೆ ಹಾಗೂ ಅಗಸನಕಟ್ಟೆ ತುಂಬಿ ಏರಿ ಮೇಲೆ ನೀರು ಹರಿದಿದ್ದು, ಕೋಡಿ ಸರಿ ಇಲ್ಲದ ಕಾರಣ ಕೆರೆ ಒಡೆಯುವ ಭೀತಿ ಎದುರಾಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

25 mins ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

59 mins ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

4 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

4 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

4 hours ago