ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿಗೆ ಸಂಪರ್ಕ ಕಷ್ಟವಾಗಿದೆ. ಮರಳಾಪುರದಲ್ಲಿ ಭಾರೀ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದ್ದು, ಈ ದೃಶ್ಯಗಳನ್ನು ನೆಟ್ಟಿಗರೊಬ್ಬರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇನ್ನು ಹಾಲಹಳ್ಳಿ ಹಾಗೂ ತೊಂಡವಾಡಿ ಸಂಪರ್ಕಿಸುವ ರಸ್ತೆ ಮುಳುಗಡೆಯಾಗಿದ್ದು, ಸಂಚಾರ ಬಂದಾಗಿದೆ. ಮೈಸೂರು – ಊಟಿ ರಸ್ತೆಯಲ್ಲಿರುವ ಹಿರಿಕಾಟಿ ಗೇಟ್ನಲ್ಲಿಯೂ ಸಹ ನೀರು ಹರಿದಿದ್ದು, ವಾಹನ ಸಂಚಾರ ತೀರ ಕಷ್ಟಸಾಧ್ಯವಾಗಿದೆ.
ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಭಾರೀ ಮಳೆಗೆ ದೇವರಕೆರೆ ಹಾಗೂ ಅಗಸನಕಟ್ಟೆ ತುಂಬಿ ಏರಿ ಮೇಲೆ ನೀರು ಹರಿದಿದ್ದು, ಕೋಡಿ ಸರಿ ಇಲ್ಲದ ಕಾರಣ ಕೆರೆ ಒಡೆಯುವ ಭೀತಿ ಎದುರಾಗಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…