ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಹೆಚ್ಚಾದ ಕಳ್ಳರ ಹಾವಳಿ: ಕಂಗಾಲಾದ ಜನತೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ಮನೆಗಳ್ಳತನ ಮುಂದುವರಿದಿದ್ದು, ಜನತೆ ಕಂಗಾಲಾಗಿದ್ದಾರೆ.

ಕಳೆದ ಒಂದು ವಾರದಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ರಾತ್ರಿ ವೇಳೆ ಖದೀಮರು ಮನೆಗಳಿಗೆ ನುಗ್ಗಿ ತಮ್ಮ ಕೈಚಳಕ ತೋರಿಸುತ್ತಿದ್ದಾರೆ.

ಗುಂಡ್ಲುಪೇಟೆ ಪಟ್ಟಣದ 12ನೇ ವಾರ್ಡ್‌ನಲ್ಲಿ ಈ ಘಟನೆ ನಡೆದಿದ್ದು, ವರದರಾಜು ಎಂಬುವವರ ಮನೆಯ ಬೀರುವಿನಲ್ಲಿದ್ದ 97 ಸಾವಿರ ನಗದು ಹಾಗೂ 10 ಗ್ರಾಂ ಚಿನ್ನದ ಓಲೆಗಳನ್ನು ಕಳ್ಳತನ ಮಾಡಲಾಗಿದೆ.

ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಇನ್ನು ಈ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಮನೆಗಳನ್ನೇ ಟಾರ್ಗೆಟ್‌ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

1 hour ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

7 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

7 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

8 hours ago

ಲಕ್ನೋ: ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು

ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…

9 hours ago