ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಏಕಾಏಕಿ ರೊಚ್ಚಿಗೆದ್ದ ಸಾಕಾನೆ ರೋಹಿತ್ ಮಾವುತನ ಮೇಲೆ ದಾಳಿ ನಡೆಸಿದ್ದು, ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ನಡೆದಿದೆ.
ರಾಂಪುರ ಆನೆ ಶಿಬಿರದಿಂದ ವಿಶೇಷ ತರಬೇತಿಗಾಗಿ ರೋಹಿತ್ ಆನೆಯನ್ನು ಬಂಡೀಪುರ ಅರಣ್ಯಕ್ಕೆ ಕರೆತರಲಾಗಿತ್ತು. ಬದಲಾದ ಪರಿಸರದ ಜೊತೆಗೆ ರೋಹಿತ್ ಆನೆಗೆ ಮದವೇರಿದ್ದು, ಮಾವುತ ವೆಂಕಟೇಶ್ ಮೇಲೆ ದಾಳಿ ನಡೆಸಿದೆ.
ಆನೆ ದಾಳಿಯಿಂದ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಮಾವುತನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ರೋಹಿತ್ ಆನೆಯು ಬಂಡೀಪುರ ರಸ್ತೆಯಲ್ಲಿ ಚಲಿಸುವ ವಾಹನಗಳ ಮೇಲೂ ಏಕಾಏಕಿ ದಾಳಿ ನಡೆಸಲು ಮುಂದಾಗಿದೆ. ಈ ವೇಳೆ ಕೆಲ ದ್ವಿಚಕ್ರ ವಾಹನ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಆನೆ ದಾಳಿಯಿಂದ ಗಂಟೆಗಟ್ಟಲೇ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಆನೆ ದಿಕ್ಕಾಪಾಲಾಗಿ ನುಗ್ಗಿದ ಪರಿಣಾಮ ವಾಹನ ಸವಾರರು ತೀವ್ರ ಭಯಭೀತರಾಗಿದ್ದರು.
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…