ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಏಕಾಏಕಿ ರೊಚ್ಚಿಗೆದ್ದ ಸಾಕಾನೆ ರೋಹಿತ್ ಮಾವುತನ ಮೇಲೆ ದಾಳಿ ನಡೆಸಿದ್ದು, ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ನಡೆದಿದೆ.
ರಾಂಪುರ ಆನೆ ಶಿಬಿರದಿಂದ ವಿಶೇಷ ತರಬೇತಿಗಾಗಿ ರೋಹಿತ್ ಆನೆಯನ್ನು ಬಂಡೀಪುರ ಅರಣ್ಯಕ್ಕೆ ಕರೆತರಲಾಗಿತ್ತು. ಬದಲಾದ ಪರಿಸರದ ಜೊತೆಗೆ ರೋಹಿತ್ ಆನೆಗೆ ಮದವೇರಿದ್ದು, ಮಾವುತ ವೆಂಕಟೇಶ್ ಮೇಲೆ ದಾಳಿ ನಡೆಸಿದೆ.
ಆನೆ ದಾಳಿಯಿಂದ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಮಾವುತನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ರೋಹಿತ್ ಆನೆಯು ಬಂಡೀಪುರ ರಸ್ತೆಯಲ್ಲಿ ಚಲಿಸುವ ವಾಹನಗಳ ಮೇಲೂ ಏಕಾಏಕಿ ದಾಳಿ ನಡೆಸಲು ಮುಂದಾಗಿದೆ. ಈ ವೇಳೆ ಕೆಲ ದ್ವಿಚಕ್ರ ವಾಹನ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಆನೆ ದಾಳಿಯಿಂದ ಗಂಟೆಗಟ್ಟಲೇ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಆನೆ ದಿಕ್ಕಾಪಾಲಾಗಿ ನುಗ್ಗಿದ ಪರಿಣಾಮ ವಾಹನ ಸವಾರರು ತೀವ್ರ ಭಯಭೀತರಾಗಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…