ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಏಕಾಏಕಿ ರೊಚ್ಚಿಗೆದ್ದ ಸಾಕಾನೆ ರೋಹಿತ್ ಮಾವುತನ ಮೇಲೆ ದಾಳಿ ನಡೆಸಿದ್ದು, ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ನಡೆದಿದೆ.
ರಾಂಪುರ ಆನೆ ಶಿಬಿರದಿಂದ ವಿಶೇಷ ತರಬೇತಿಗಾಗಿ ರೋಹಿತ್ ಆನೆಯನ್ನು ಬಂಡೀಪುರ ಅರಣ್ಯಕ್ಕೆ ಕರೆತರಲಾಗಿತ್ತು. ಬದಲಾದ ಪರಿಸರದ ಜೊತೆಗೆ ರೋಹಿತ್ ಆನೆಗೆ ಮದವೇರಿದ್ದು, ಮಾವುತ ವೆಂಕಟೇಶ್ ಮೇಲೆ ದಾಳಿ ನಡೆಸಿದೆ.
ಆನೆ ದಾಳಿಯಿಂದ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಮಾವುತನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ರೋಹಿತ್ ಆನೆಯು ಬಂಡೀಪುರ ರಸ್ತೆಯಲ್ಲಿ ಚಲಿಸುವ ವಾಹನಗಳ ಮೇಲೂ ಏಕಾಏಕಿ ದಾಳಿ ನಡೆಸಲು ಮುಂದಾಗಿದೆ. ಈ ವೇಳೆ ಕೆಲ ದ್ವಿಚಕ್ರ ವಾಹನ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಆನೆ ದಾಳಿಯಿಂದ ಗಂಟೆಗಟ್ಟಲೇ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಆನೆ ದಿಕ್ಕಾಪಾಲಾಗಿ ನುಗ್ಗಿದ ಪರಿಣಾಮ ವಾಹನ ಸವಾರರು ತೀವ್ರ ಭಯಭೀತರಾಗಿದ್ದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…