ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಏಕಾಏಕಿ ರೊಚ್ಚಿಗೆದ್ದ ಸಾಕಾನೆ ರೋಹಿತ್ ಮಾವುತನ ಮೇಲೆ ದಾಳಿ ನಡೆಸಿದ್ದು, ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ನಡೆದಿದೆ.
ರಾಂಪುರ ಆನೆ ಶಿಬಿರದಿಂದ ವಿಶೇಷ ತರಬೇತಿಗಾಗಿ ರೋಹಿತ್ ಆನೆಯನ್ನು ಬಂಡೀಪುರ ಅರಣ್ಯಕ್ಕೆ ಕರೆತರಲಾಗಿತ್ತು. ಬದಲಾದ ಪರಿಸರದ ಜೊತೆಗೆ ರೋಹಿತ್ ಆನೆಗೆ ಮದವೇರಿದ್ದು, ಮಾವುತ ವೆಂಕಟೇಶ್ ಮೇಲೆ ದಾಳಿ ನಡೆಸಿದೆ.
ಆನೆ ದಾಳಿಯಿಂದ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಮಾವುತನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ರೋಹಿತ್ ಆನೆಯು ಬಂಡೀಪುರ ರಸ್ತೆಯಲ್ಲಿ ಚಲಿಸುವ ವಾಹನಗಳ ಮೇಲೂ ಏಕಾಏಕಿ ದಾಳಿ ನಡೆಸಲು ಮುಂದಾಗಿದೆ. ಈ ವೇಳೆ ಕೆಲ ದ್ವಿಚಕ್ರ ವಾಹನ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಆನೆ ದಾಳಿಯಿಂದ ಗಂಟೆಗಟ್ಟಲೇ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಆನೆ ದಿಕ್ಕಾಪಾಲಾಗಿ ನುಗ್ಗಿದ ಪರಿಣಾಮ ವಾಹನ ಸವಾರರು ತೀವ್ರ ಭಯಭೀತರಾಗಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…