ಚಾಮರಾಜನಗರ

ಹನೂರು | ಕೊಠಡಿ ಶಿಥಿಲ ; ಶಾಲೆಗೆ ಮಕ್ಕಳನ್ನು ಕಳಿಸದ ಪೋಷಕರು

ಹನೂರು : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಕೊಠಡಿಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ಶಾಲಾ ಕೊಠಡಿಗಳು ದುರಸ್ತಿಯಾಗುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಸಾಮೂಹಿಕವಾಗಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸದಿರುವ ಘಟನೆ ತಾಲ್ಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಕೂಡ್ಲೂರು ಕ್ಲಸ್ಟರ್ ವ್ಯಾಪ್ತಿಯ ಪೆದ್ದನ ಪಾಳ್ಯ ಗ್ರಾಮದ ಸರ್ಕಾರಿ ಶಾಲೆಯಲ್ಲಿ 1ನೇ ತರಗತಿಯಿಂದ 7ನೇ ತರಗತಿಯವರೆಗೆ 62 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಅವಾಂತರಗಳಿಂದ ಪೋಷಕರು ಬೇಸತ್ತು ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದಾರೆ. 4 ದಿನಗಳಿಂದ ಸತತವಾಗಿ ಮಳೆಯಾಗುತ್ತಿರುವುದರಿಂದ ಕೊಠಡಿಗಳು ಶಿಥಿಲವಾಗಿರುವುದರಿಂದ ಮಳೆಯ ನೀರು ಸೋರುತ್ತಿದ್ದು, ಕಾಂಕ್ರೀಟ್ ಚೂರುಗಳು ಕೆಳಗೆ ಬೀಳುತ್ತಿವೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದರಿಂದ ಪ್ರತಿನಿತ್ಯ ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಪಾಠ ಕೇಳುವಂತಾಗಿದೆ.

ಪೆದ್ದನಪಾಳ್ಯ ಗ್ರಾಮದ ಮುಖಂಡ ಕುಮಾರ್ ಮಾತನಾಡಿ, ಪೆದ್ದನ ಪಾಳ್ಯ ಸರ್ಕಾರಿ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸಮಸ್ಯೆಗಳು ಬಗೆಹರಿದಿಲ್ಲ. ಮಳೆ ಬಂದಾಗ ಕೊಠಡಿಗಳು ಸೋರುತ್ತಿದೆ. ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಅಕ್ಷರ ದಾಸೋಹದ ಕೊಠಡಿ ಇಲ್ಲದೆ ಇರುವುದರಿಂದ ಶಾಲಾ ಕೊಠಡಿಯಲ್ಲಿಯೇ ಪ್ರತಿನಿತ್ಯ ಬಿಸಿಯೂಟ ತಯಾರು ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತಷ್ಟು ತೊಂದರೆಯಾಗುತ್ತಿದೆ ಎಂದು ದೂರಿದರು.

ಸಂಧಾನ ವಿಫಲ
ವಿಚಾರ ತಿಳಿಯುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಹಾಗೂ ಇತರೆ ಅಧಿಕಾರಿಗಳು ಗ್ರಾಮದ ಶಾಲೆಗೆ ಭೇಟಿ ನೀಡಿ ಪೋಷಕರ ಜೊತೆ ಚರ್ಚೆ ನಡೆಸಿ ಮನವೊಲಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಪೋಷಕರು, ನಿಮ್ಮ ಮಾತಿಗೆ ಬೆಲೆ ಕೊಟ್ಟು ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ. ನಮ್ಮ ಮಕ್ಕಳಿಗೆ ಏನೇ ತೊಂದರೆ ಆದರೂ ನಾವು ಜವಾಬ್ದಾರಿಯಾಗುತ್ತೇವೆ ಎಂದು ಲಿಖಿತವಾಗಿ ಬರೆದು ಕೊಡಿ ಎಂದು ಪಟ್ಟು ಹಿಡಿದರು. ಆದರೆ ಅಧಿಕಾರಿಗಳು ಇದಕ್ಕೆ ಒಪ್ಪದೆ ಹಿಂತಿರುಗಿದರು.

ಶಾಲಾ ಆವರಣದಲ್ಲಿ ಕುಳಿತ ವಿದ್ಯಾರ್ಥಿಗಳು
ಶಾಲಾ ಕೊಠಡಿ ಶಿಥಿಲಗೊಂಡಿರುವುದರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ಇರುವುದರಿಂದ ಗ್ರಾಮದ ದೇವಸ್ಥಾನದ ಆವರಣದಲ್ಲಿ ವಿದ್ಯಾರ್ಥಿಗಳು ಒಟ್ಟಿಗೆ ಕುಳಿತು, ಈ ಹಿಂದೆ ಮಾಡಿರುವ ಪಾಠ ಪ್ರವಚನಗಳನ್ನು ಓದಿದ್ದಾರೆ.

ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್, ಶಿಕ್ಷಣ ಇಲಾಖೆಯ ಇಸಿಒ ರವೀಂದ್ರ, ಸಿಆರ್‌ಪಿ ಷಣ್ಮುಗ, ಶಾಲೆಯ ಸಹ ಶಿಕ್ಷಕರು, ಗ್ರಾಮಸ್ಥರಾದ ಮುರಳಿ, ಈರಣ್ಣ, ಸತೀಶ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

10 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

35 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago