ಚಾಮರಾಜನಗರ

ಹನೂರು | ಕೊಠಡಿ ಶಿಥಿಲ ; ಶಾಲೆಗೆ ಮಕ್ಕಳನ್ನು ಕಳಿಸದ ಪೋಷಕರು

ಹನೂರು : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಕೊಠಡಿಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ಶಾಲಾ ಕೊಠಡಿಗಳು ದುರಸ್ತಿಯಾಗುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಸಾಮೂಹಿಕವಾಗಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸದಿರುವ ಘಟನೆ ತಾಲ್ಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಕೂಡ್ಲೂರು ಕ್ಲಸ್ಟರ್ ವ್ಯಾಪ್ತಿಯ ಪೆದ್ದನ ಪಾಳ್ಯ ಗ್ರಾಮದ ಸರ್ಕಾರಿ ಶಾಲೆಯಲ್ಲಿ 1ನೇ ತರಗತಿಯಿಂದ 7ನೇ ತರಗತಿಯವರೆಗೆ 62 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಅವಾಂತರಗಳಿಂದ ಪೋಷಕರು ಬೇಸತ್ತು ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದಾರೆ. 4 ದಿನಗಳಿಂದ ಸತತವಾಗಿ ಮಳೆಯಾಗುತ್ತಿರುವುದರಿಂದ ಕೊಠಡಿಗಳು ಶಿಥಿಲವಾಗಿರುವುದರಿಂದ ಮಳೆಯ ನೀರು ಸೋರುತ್ತಿದ್ದು, ಕಾಂಕ್ರೀಟ್ ಚೂರುಗಳು ಕೆಳಗೆ ಬೀಳುತ್ತಿವೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದರಿಂದ ಪ್ರತಿನಿತ್ಯ ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಪಾಠ ಕೇಳುವಂತಾಗಿದೆ.

ಪೆದ್ದನಪಾಳ್ಯ ಗ್ರಾಮದ ಮುಖಂಡ ಕುಮಾರ್ ಮಾತನಾಡಿ, ಪೆದ್ದನ ಪಾಳ್ಯ ಸರ್ಕಾರಿ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸಮಸ್ಯೆಗಳು ಬಗೆಹರಿದಿಲ್ಲ. ಮಳೆ ಬಂದಾಗ ಕೊಠಡಿಗಳು ಸೋರುತ್ತಿದೆ. ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಅಕ್ಷರ ದಾಸೋಹದ ಕೊಠಡಿ ಇಲ್ಲದೆ ಇರುವುದರಿಂದ ಶಾಲಾ ಕೊಠಡಿಯಲ್ಲಿಯೇ ಪ್ರತಿನಿತ್ಯ ಬಿಸಿಯೂಟ ತಯಾರು ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತಷ್ಟು ತೊಂದರೆಯಾಗುತ್ತಿದೆ ಎಂದು ದೂರಿದರು.

ಸಂಧಾನ ವಿಫಲ
ವಿಚಾರ ತಿಳಿಯುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಹಾಗೂ ಇತರೆ ಅಧಿಕಾರಿಗಳು ಗ್ರಾಮದ ಶಾಲೆಗೆ ಭೇಟಿ ನೀಡಿ ಪೋಷಕರ ಜೊತೆ ಚರ್ಚೆ ನಡೆಸಿ ಮನವೊಲಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಪೋಷಕರು, ನಿಮ್ಮ ಮಾತಿಗೆ ಬೆಲೆ ಕೊಟ್ಟು ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ. ನಮ್ಮ ಮಕ್ಕಳಿಗೆ ಏನೇ ತೊಂದರೆ ಆದರೂ ನಾವು ಜವಾಬ್ದಾರಿಯಾಗುತ್ತೇವೆ ಎಂದು ಲಿಖಿತವಾಗಿ ಬರೆದು ಕೊಡಿ ಎಂದು ಪಟ್ಟು ಹಿಡಿದರು. ಆದರೆ ಅಧಿಕಾರಿಗಳು ಇದಕ್ಕೆ ಒಪ್ಪದೆ ಹಿಂತಿರುಗಿದರು.

ಶಾಲಾ ಆವರಣದಲ್ಲಿ ಕುಳಿತ ವಿದ್ಯಾರ್ಥಿಗಳು
ಶಾಲಾ ಕೊಠಡಿ ಶಿಥಿಲಗೊಂಡಿರುವುದರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ಇರುವುದರಿಂದ ಗ್ರಾಮದ ದೇವಸ್ಥಾನದ ಆವರಣದಲ್ಲಿ ವಿದ್ಯಾರ್ಥಿಗಳು ಒಟ್ಟಿಗೆ ಕುಳಿತು, ಈ ಹಿಂದೆ ಮಾಡಿರುವ ಪಾಠ ಪ್ರವಚನಗಳನ್ನು ಓದಿದ್ದಾರೆ.

ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್, ಶಿಕ್ಷಣ ಇಲಾಖೆಯ ಇಸಿಒ ರವೀಂದ್ರ, ಸಿಆರ್‌ಪಿ ಷಣ್ಮುಗ, ಶಾಲೆಯ ಸಹ ಶಿಕ್ಷಕರು, ಗ್ರಾಮಸ್ಥರಾದ ಮುರಳಿ, ಈರಣ್ಣ, ಸತೀಶ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago