ಚಾಮರಾಜನಗರ

ಹನೂರು : ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2.85 ಕೋಟಿ ರೂ. ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ.

ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ(ಮಾರ್ಚ್‌.12) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ಕೇವಲ 20 ದಿನಗಳ ಅವಧಿಯಲ್ಲಿ 2. 85 ಕೋಟಿ ರೂ. ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿನ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ನಿನ್ನೆ ರಾತ್ರಿ 8 ಗಂಟೆಗೆ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಈ ಎಣಿಕೆಯಲ್ಲಿ 2,85,60,937 ರೂ. ನಗದು ಹಣ, 27 ಗ್ರಾಂ ಚಿನ್ನ ಹಾಗೂ 1800 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಭಕ್ತರು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಶಿವರಾತ್ರಿ ಹಬ್ಬದ ವೇಳೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ದೂರಿಯಾಗಿ ಜಾತ್ರೆ ನಡೆದಿತ್ತು. ಈ ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿ ಮಾದಪ್ಪನನ್ನು ಕಣ್ತುಂಬಿಕೊಂಡಿದ್ದರು.

ಅರ್ಚನ ಎಸ್‌ ಎಸ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

6 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

7 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

8 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

9 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

9 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

10 hours ago