ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ.
ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ(ಮಾರ್ಚ್.12) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ಕೇವಲ 20 ದಿನಗಳ ಅವಧಿಯಲ್ಲಿ 2. 85 ಕೋಟಿ ರೂ. ಸಂಗ್ರಹವಾಗಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿನ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ನಿನ್ನೆ ರಾತ್ರಿ 8 ಗಂಟೆಗೆ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಈ ಎಣಿಕೆಯಲ್ಲಿ 2,85,60,937 ರೂ. ನಗದು ಹಣ, 27 ಗ್ರಾಂ ಚಿನ್ನ ಹಾಗೂ 1800 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಭಕ್ತರು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಶಿವರಾತ್ರಿ ಹಬ್ಬದ ವೇಳೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ದೂರಿಯಾಗಿ ಜಾತ್ರೆ ನಡೆದಿತ್ತು. ಈ ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿ ಮಾದಪ್ಪನನ್ನು ಕಣ್ತುಂಬಿಕೊಂಡಿದ್ದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…