ಚಾಮರಾಜನಗರ

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.

ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ ದೂರಿನಲ್ಲಿ, ನಾನೂ ಸೇರಿದಂತೆ ಒಟ್ಟು ೨೪ ಮಂದಿ ಹಾರ್ಟ್ ಅಕಾಡೆಮಿ ಎಂಬ ಸಂಸ್ಥೆಯಲ್ಲಿ ಠೇವಣಿ ಇಟ್ಟಿದ್ದೆವು.

ಕಳೆದ ವರ್ಷ ಡಿಸೆಂಬರ್ ನಲ್ಲಿ ಪರಮಹಂಸ ರಸ್ತೆುಂಲ್ಲಿ ಕಚೇರಿಯನ್ನು ತೆರೆುಂಲಾಗಿತ್ತು. ಕಮಲೇಶ್ ಹಾಗೂ ಸರೋಜಮ್ಮ ಅವರು, ನೀವು ಇದೇ ರೀತಿ ಹಣ ಸಂಗ್ರಹಿಸಿ ನೀಡಿದರೆ ತಿಂಗಳಿಗೆ ೨೫ ಸಾವಿರ ರೂ. ಮತ್ತು ನಿಮ್ಮ ಕುಟುಂಬದ ಎಲ್ಲರನ್ನು ವಿಮೆುಂಲ್ಲಿ ಸೇರಿಸಿ ಆಸ್ಪತ್ರೆಯ ಬಿಲ್ ನ್ನು ಉಚಿತವಾಗಿ ಭರಿಸುತ್ತೇವೆ ಎಂದು ನಂಬಿಸಿದ್ದರು. ಅವರ ವಾತನ್ನು ನಂಬಿ ನಾವು ೨೪ ಮಂದಿ ಹಣ ಸಂಗ್ರಹಿಸಿ ಠೇವಣಿ ಇಟ್ಟಿದ್ದೆವು. ಆದರೆ ಕಮಲೇಶ್ ಹಾಗೂ ಸರೋಜಮ್ಮ ಕಚೇರಿಯಲ್ಲಿ ಕಾಣಿಸಿಕೊಳ್ಳದಿದ್ದಾಗ ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರಿಸಿದೆವು. ಆಗ ನೀವು ಗಾಬರಿ ಪಡುವ ಅಗತ್ಯವಿಲ್ಲ. ನಾವು ಇಷ್ಟರಲ್ಲೇ ಬರುತ್ತೇವೆ ಎಂದರು.

ಆದರೆ ಈಗ ಡಿಸೆಂಬರ್ ೪ ರಂದು ಪರಮಹಂಸ ರಸ್ತೆಲ್ಲಿ ತೆರೆಯಲಾಗಿದ್ದ ಕಚೇರಿಯನ್ನು ಖಾಲಿಮಾಡಿ ಪೀಠೋಪಕರಣಗಳನ್ನು ಕೊಂಡೊಯ್ದಿದ್ದಾರೆ. ಹೀಗಾಗಿ ನಾವು ಮೋಸ ಹೋಗಿರುವುದು ಗೊತ್ತಾಗಿದೆ. ನಮ್ಮ ಹಣವನ್ನು ಕೊಡಿಸಬೇಕು ಎಂದು ಮನವಿ ವಾಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪಟ್ಟಣ ಪೊಲೀಸರು ಆರೋಪಿಗಳಾದ ಕಮಲೇಶ್ ಹಾಗೂ ಸರೋಜಮ್ಮ ಅವರ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

18 mins ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

21 mins ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

25 mins ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

31 mins ago

ಎಲ್ಲೆಂದರಲ್ಲಿ ಕಸ ಸುರಿದರೆ ಬೀಳಲಿದೆ ದಂಡ!

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…

35 mins ago

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

1 hour ago