Fraud in records
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.
ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ ದೂರಿನಲ್ಲಿ, ನಾನೂ ಸೇರಿದಂತೆ ಒಟ್ಟು ೨೪ ಮಂದಿ ಹಾರ್ಟ್ ಅಕಾಡೆಮಿ ಎಂಬ ಸಂಸ್ಥೆಯಲ್ಲಿ ಠೇವಣಿ ಇಟ್ಟಿದ್ದೆವು.
ಕಳೆದ ವರ್ಷ ಡಿಸೆಂಬರ್ ನಲ್ಲಿ ಪರಮಹಂಸ ರಸ್ತೆುಂಲ್ಲಿ ಕಚೇರಿಯನ್ನು ತೆರೆುಂಲಾಗಿತ್ತು. ಕಮಲೇಶ್ ಹಾಗೂ ಸರೋಜಮ್ಮ ಅವರು, ನೀವು ಇದೇ ರೀತಿ ಹಣ ಸಂಗ್ರಹಿಸಿ ನೀಡಿದರೆ ತಿಂಗಳಿಗೆ ೨೫ ಸಾವಿರ ರೂ. ಮತ್ತು ನಿಮ್ಮ ಕುಟುಂಬದ ಎಲ್ಲರನ್ನು ವಿಮೆುಂಲ್ಲಿ ಸೇರಿಸಿ ಆಸ್ಪತ್ರೆಯ ಬಿಲ್ ನ್ನು ಉಚಿತವಾಗಿ ಭರಿಸುತ್ತೇವೆ ಎಂದು ನಂಬಿಸಿದ್ದರು. ಅವರ ವಾತನ್ನು ನಂಬಿ ನಾವು ೨೪ ಮಂದಿ ಹಣ ಸಂಗ್ರಹಿಸಿ ಠೇವಣಿ ಇಟ್ಟಿದ್ದೆವು. ಆದರೆ ಕಮಲೇಶ್ ಹಾಗೂ ಸರೋಜಮ್ಮ ಕಚೇರಿಯಲ್ಲಿ ಕಾಣಿಸಿಕೊಳ್ಳದಿದ್ದಾಗ ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರಿಸಿದೆವು. ಆಗ ನೀವು ಗಾಬರಿ ಪಡುವ ಅಗತ್ಯವಿಲ್ಲ. ನಾವು ಇಷ್ಟರಲ್ಲೇ ಬರುತ್ತೇವೆ ಎಂದರು.
ಆದರೆ ಈಗ ಡಿಸೆಂಬರ್ ೪ ರಂದು ಪರಮಹಂಸ ರಸ್ತೆಲ್ಲಿ ತೆರೆಯಲಾಗಿದ್ದ ಕಚೇರಿಯನ್ನು ಖಾಲಿಮಾಡಿ ಪೀಠೋಪಕರಣಗಳನ್ನು ಕೊಂಡೊಯ್ದಿದ್ದಾರೆ. ಹೀಗಾಗಿ ನಾವು ಮೋಸ ಹೋಗಿರುವುದು ಗೊತ್ತಾಗಿದೆ. ನಮ್ಮ ಹಣವನ್ನು ಕೊಡಿಸಬೇಕು ಎಂದು ಮನವಿ ವಾಡಿದ್ದಾರೆ.
ದೂರು ದಾಖಲಿಸಿಕೊಂಡಿರುವ ಪಟ್ಟಣ ಪೊಲೀಸರು ಆರೋಪಿಗಳಾದ ಕಮಲೇಶ್ ಹಾಗೂ ಸರೋಜಮ್ಮ ಅವರ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…