ಚಾಮರಾಜನಗರ

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.

ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ ದೂರಿನಲ್ಲಿ, ನಾನೂ ಸೇರಿದಂತೆ ಒಟ್ಟು ೨೪ ಮಂದಿ ಹಾರ್ಟ್ ಅಕಾಡೆಮಿ ಎಂಬ ಸಂಸ್ಥೆಯಲ್ಲಿ ಠೇವಣಿ ಇಟ್ಟಿದ್ದೆವು.

ಕಳೆದ ವರ್ಷ ಡಿಸೆಂಬರ್ ನಲ್ಲಿ ಪರಮಹಂಸ ರಸ್ತೆುಂಲ್ಲಿ ಕಚೇರಿಯನ್ನು ತೆರೆುಂಲಾಗಿತ್ತು. ಕಮಲೇಶ್ ಹಾಗೂ ಸರೋಜಮ್ಮ ಅವರು, ನೀವು ಇದೇ ರೀತಿ ಹಣ ಸಂಗ್ರಹಿಸಿ ನೀಡಿದರೆ ತಿಂಗಳಿಗೆ ೨೫ ಸಾವಿರ ರೂ. ಮತ್ತು ನಿಮ್ಮ ಕುಟುಂಬದ ಎಲ್ಲರನ್ನು ವಿಮೆುಂಲ್ಲಿ ಸೇರಿಸಿ ಆಸ್ಪತ್ರೆಯ ಬಿಲ್ ನ್ನು ಉಚಿತವಾಗಿ ಭರಿಸುತ್ತೇವೆ ಎಂದು ನಂಬಿಸಿದ್ದರು. ಅವರ ವಾತನ್ನು ನಂಬಿ ನಾವು ೨೪ ಮಂದಿ ಹಣ ಸಂಗ್ರಹಿಸಿ ಠೇವಣಿ ಇಟ್ಟಿದ್ದೆವು. ಆದರೆ ಕಮಲೇಶ್ ಹಾಗೂ ಸರೋಜಮ್ಮ ಕಚೇರಿಯಲ್ಲಿ ಕಾಣಿಸಿಕೊಳ್ಳದಿದ್ದಾಗ ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರಿಸಿದೆವು. ಆಗ ನೀವು ಗಾಬರಿ ಪಡುವ ಅಗತ್ಯವಿಲ್ಲ. ನಾವು ಇಷ್ಟರಲ್ಲೇ ಬರುತ್ತೇವೆ ಎಂದರು.

ಆದರೆ ಈಗ ಡಿಸೆಂಬರ್ ೪ ರಂದು ಪರಮಹಂಸ ರಸ್ತೆಲ್ಲಿ ತೆರೆಯಲಾಗಿದ್ದ ಕಚೇರಿಯನ್ನು ಖಾಲಿಮಾಡಿ ಪೀಠೋಪಕರಣಗಳನ್ನು ಕೊಂಡೊಯ್ದಿದ್ದಾರೆ. ಹೀಗಾಗಿ ನಾವು ಮೋಸ ಹೋಗಿರುವುದು ಗೊತ್ತಾಗಿದೆ. ನಮ್ಮ ಹಣವನ್ನು ಕೊಡಿಸಬೇಕು ಎಂದು ಮನವಿ ವಾಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪಟ್ಟಣ ಪೊಲೀಸರು ಆರೋಪಿಗಳಾದ ಕಮಲೇಶ್ ಹಾಗೂ ಸರೋಜಮ್ಮ ಅವರ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

1 hour ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

2 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

6 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

8 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

8 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

9 hours ago