ಚಾಮರಾಜನಗರ

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.

ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ ದೂರಿನಲ್ಲಿ, ನಾನೂ ಸೇರಿದಂತೆ ಒಟ್ಟು ೨೪ ಮಂದಿ ಹಾರ್ಟ್ ಅಕಾಡೆಮಿ ಎಂಬ ಸಂಸ್ಥೆಯಲ್ಲಿ ಠೇವಣಿ ಇಟ್ಟಿದ್ದೆವು.

ಕಳೆದ ವರ್ಷ ಡಿಸೆಂಬರ್ ನಲ್ಲಿ ಪರಮಹಂಸ ರಸ್ತೆುಂಲ್ಲಿ ಕಚೇರಿಯನ್ನು ತೆರೆುಂಲಾಗಿತ್ತು. ಕಮಲೇಶ್ ಹಾಗೂ ಸರೋಜಮ್ಮ ಅವರು, ನೀವು ಇದೇ ರೀತಿ ಹಣ ಸಂಗ್ರಹಿಸಿ ನೀಡಿದರೆ ತಿಂಗಳಿಗೆ ೨೫ ಸಾವಿರ ರೂ. ಮತ್ತು ನಿಮ್ಮ ಕುಟುಂಬದ ಎಲ್ಲರನ್ನು ವಿಮೆುಂಲ್ಲಿ ಸೇರಿಸಿ ಆಸ್ಪತ್ರೆಯ ಬಿಲ್ ನ್ನು ಉಚಿತವಾಗಿ ಭರಿಸುತ್ತೇವೆ ಎಂದು ನಂಬಿಸಿದ್ದರು. ಅವರ ವಾತನ್ನು ನಂಬಿ ನಾವು ೨೪ ಮಂದಿ ಹಣ ಸಂಗ್ರಹಿಸಿ ಠೇವಣಿ ಇಟ್ಟಿದ್ದೆವು. ಆದರೆ ಕಮಲೇಶ್ ಹಾಗೂ ಸರೋಜಮ್ಮ ಕಚೇರಿಯಲ್ಲಿ ಕಾಣಿಸಿಕೊಳ್ಳದಿದ್ದಾಗ ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರಿಸಿದೆವು. ಆಗ ನೀವು ಗಾಬರಿ ಪಡುವ ಅಗತ್ಯವಿಲ್ಲ. ನಾವು ಇಷ್ಟರಲ್ಲೇ ಬರುತ್ತೇವೆ ಎಂದರು.

ಆದರೆ ಈಗ ಡಿಸೆಂಬರ್ ೪ ರಂದು ಪರಮಹಂಸ ರಸ್ತೆಲ್ಲಿ ತೆರೆಯಲಾಗಿದ್ದ ಕಚೇರಿಯನ್ನು ಖಾಲಿಮಾಡಿ ಪೀಠೋಪಕರಣಗಳನ್ನು ಕೊಂಡೊಯ್ದಿದ್ದಾರೆ. ಹೀಗಾಗಿ ನಾವು ಮೋಸ ಹೋಗಿರುವುದು ಗೊತ್ತಾಗಿದೆ. ನಮ್ಮ ಹಣವನ್ನು ಕೊಡಿಸಬೇಕು ಎಂದು ಮನವಿ ವಾಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪಟ್ಟಣ ಪೊಲೀಸರು ಆರೋಪಿಗಳಾದ ಕಮಲೇಶ್ ಹಾಗೂ ಸರೋಜಮ್ಮ ಅವರ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

2 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

6 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

9 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

9 hours ago