ಚಾಮರಾಜನಗರ

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.

ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ ದೂರಿನಲ್ಲಿ, ನಾನೂ ಸೇರಿದಂತೆ ಒಟ್ಟು ೨೪ ಮಂದಿ ಹಾರ್ಟ್ ಅಕಾಡೆಮಿ ಎಂಬ ಸಂಸ್ಥೆಯಲ್ಲಿ ಠೇವಣಿ ಇಟ್ಟಿದ್ದೆವು.

ಕಳೆದ ವರ್ಷ ಡಿಸೆಂಬರ್ ನಲ್ಲಿ ಪರಮಹಂಸ ರಸ್ತೆುಂಲ್ಲಿ ಕಚೇರಿಯನ್ನು ತೆರೆುಂಲಾಗಿತ್ತು. ಕಮಲೇಶ್ ಹಾಗೂ ಸರೋಜಮ್ಮ ಅವರು, ನೀವು ಇದೇ ರೀತಿ ಹಣ ಸಂಗ್ರಹಿಸಿ ನೀಡಿದರೆ ತಿಂಗಳಿಗೆ ೨೫ ಸಾವಿರ ರೂ. ಮತ್ತು ನಿಮ್ಮ ಕುಟುಂಬದ ಎಲ್ಲರನ್ನು ವಿಮೆುಂಲ್ಲಿ ಸೇರಿಸಿ ಆಸ್ಪತ್ರೆಯ ಬಿಲ್ ನ್ನು ಉಚಿತವಾಗಿ ಭರಿಸುತ್ತೇವೆ ಎಂದು ನಂಬಿಸಿದ್ದರು. ಅವರ ವಾತನ್ನು ನಂಬಿ ನಾವು ೨೪ ಮಂದಿ ಹಣ ಸಂಗ್ರಹಿಸಿ ಠೇವಣಿ ಇಟ್ಟಿದ್ದೆವು. ಆದರೆ ಕಮಲೇಶ್ ಹಾಗೂ ಸರೋಜಮ್ಮ ಕಚೇರಿಯಲ್ಲಿ ಕಾಣಿಸಿಕೊಳ್ಳದಿದ್ದಾಗ ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರಿಸಿದೆವು. ಆಗ ನೀವು ಗಾಬರಿ ಪಡುವ ಅಗತ್ಯವಿಲ್ಲ. ನಾವು ಇಷ್ಟರಲ್ಲೇ ಬರುತ್ತೇವೆ ಎಂದರು.

ಆದರೆ ಈಗ ಡಿಸೆಂಬರ್ ೪ ರಂದು ಪರಮಹಂಸ ರಸ್ತೆಲ್ಲಿ ತೆರೆಯಲಾಗಿದ್ದ ಕಚೇರಿಯನ್ನು ಖಾಲಿಮಾಡಿ ಪೀಠೋಪಕರಣಗಳನ್ನು ಕೊಂಡೊಯ್ದಿದ್ದಾರೆ. ಹೀಗಾಗಿ ನಾವು ಮೋಸ ಹೋಗಿರುವುದು ಗೊತ್ತಾಗಿದೆ. ನಮ್ಮ ಹಣವನ್ನು ಕೊಡಿಸಬೇಕು ಎಂದು ಮನವಿ ವಾಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪಟ್ಟಣ ಪೊಲೀಸರು ಆರೋಪಿಗಳಾದ ಕಮಲೇಶ್ ಹಾಗೂ ಸರೋಜಮ್ಮ ಅವರ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

16 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

16 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

16 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

16 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

16 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

19 hours ago