ಚಾಮರಾಜನಗರ

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌ ಅಭಾವದ ಸುದ್ದಿ ಹಬ್ಬುತ್ತಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್‌ ಖಾಲಿಯಾಗಿರುವ ವದಂತಿಯಿಂದಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದ್ದು, ಜಿಲ್ಲೆಯ ಜನರು, ವಾಹನ ಸವಾರರು ಪೆಟ್ರೋಲ್‌ ಬಂಕ್‌ಗಳಿಗೆ ಮುಗಿ ಬೀಳುತ್ತಿದ್ದಾರೆ.

ಗ್ಯಾಸ್‌ ಕೊರತೆಯಂತೆಯೇ ಪೆಟ್ರೋಲ್‌ ಹಾಗೂ ಡೀಸೆಲ್‌ಗಳು ಸಮಸ್ಯೆ ಉಂಟಾಗಬಹುದು ಎಂಬ ಭಯ ಜನರಲ್ಲಿ ಹೆಚ್ಚಾಗಿದೆ. ಮುಂಜಾಗ್ರತೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಖರೀದಿಸಲು ಜನರು ಹರಸಾಹಸ ಪಡುತ್ತಿದ್ದಾರೆ. ಕೆಲವು ಕಡೆಗಳಲ್ಲಿ ವಾಹನಗಳ ದೀರ್ಘ ಸಾಲುಗಳು ಟ್ರಾಫಿಕ್‌ ಸಮಸ್ಯೆಯನ್ನೂ ಉಂಟುಮಾಡಿದೆ.

ಬಂಕ್‌ ಸಿಬ್ಬಂದಿ, ಪೆಟ್ರೋಲ್‌ ಹಾಗೂ ಡೀಸೆಲ್‌ ಸಾಕಷ್ಟು ಲಭ್ಯವಿದೆ. ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದರೂ ಜನರು ಮಾತ್ರ ಖರೀದಿಗೆ ಧಾವಿಸುತ್ತಲೇ ಇದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

20 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

20 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

20 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

20 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

20 hours ago