ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಬೆಳಗಿನ ಜಾವ ಒಂದೂವರೆ ಗಂಟೆಯ ವೇಳೆಯಲ್ಲಿ ಕಾಡಾನೆಗಳ ಓಡಾಟ ಕಂಡು ಬಂದಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೊಳ್ಳೇಗಾಲ ಪಟ್ಟಣದ ಡಾ.ರಾಜ್ ಕುಮಾರ್ ರಸ್ತೆ ವೃತ್ತದ ಬಳಿ ಇಂದು(ಡಿ.6) ಬೆಳಗಿನ ಜಾವ ಸುಮಾರು ಒಂದೂವರೆ ಗಂಟೆಯ ಸಮಯದಲ್ಲಿ ಎರಡು ಕಾಡಾನೆಗಳು ಸಂಚಾರ ಮಾಡಿರುವ ದೃಶ್ಯ ಕಂಡು ಬಂದಿದೆ. ಈ ದೃಶ್ಯವನ್ನು ಪೆಟ್ರೋಲ್ ಬಂಕ್ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಸೆರೆ ಹಿಡಿದಿದೆ.
ಕಾಡಾನೆಗಳು ರಸ್ತೆಯಲ್ಲಿ ಸಂಚಾರಿಸುತ್ತಿರುವಾಗ ಪೆಟ್ರೋಲ್ ಬಂಕ್ ಒಳಗೆ ಬಂದು ಓಡಾಟ ಮಾಡಿ, ಬಳಿಕ ಮತ್ತೆ ರಸ್ತೆಗೆ ತೆರಳಿದ ದೃಶ್ಯ ಸಿಸಿ ಟಿ.ವಿ.ಯಲ್ಲಿ ಸೆರೆಯಾಗಿದೆ. ಇದೇ ವೇಳೆ ರಸ್ತೆಯಲ್ಲಿ ಆನೆ ಬರುವುದನ್ನು ಕಂಡ ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಹೆದರಿ ಸ್ಥಳದಿಂದಲೇ ಪರಾರಿಯಾಗಿದ್ದಾರೆ. ಅಲ್ಲದೇ ಈ ವಿಚಾರವನ್ನು ಅರಣ್ಯ
ಇಲಾಖೆಯವರಿಗೆ ತಿಳಿಸಿದ್ದು, ಅರಣ್ಯ ಇಲಾಖೆಯವರು ಇದೀಗ ಕಾಡಾನೆಗಳನ್ನು ಸೆರೆ ಹಿಡಿಯಲು ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…