ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಬೆಳಗಿನ ಜಾವ ಒಂದೂವರೆ ಗಂಟೆಯ ವೇಳೆಯಲ್ಲಿ ಕಾಡಾನೆಗಳ ಓಡಾಟ ಕಂಡು ಬಂದಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೊಳ್ಳೇಗಾಲ ಪಟ್ಟಣದ ಡಾ.ರಾಜ್ ಕುಮಾರ್ ರಸ್ತೆ ವೃತ್ತದ ಬಳಿ ಇಂದು(ಡಿ.6) ಬೆಳಗಿನ ಜಾವ ಸುಮಾರು ಒಂದೂವರೆ ಗಂಟೆಯ ಸಮಯದಲ್ಲಿ ಎರಡು ಕಾಡಾನೆಗಳು ಸಂಚಾರ ಮಾಡಿರುವ ದೃಶ್ಯ ಕಂಡು ಬಂದಿದೆ. ಈ ದೃಶ್ಯವನ್ನು ಪೆಟ್ರೋಲ್ ಬಂಕ್ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಸೆರೆ ಹಿಡಿದಿದೆ.
ಕಾಡಾನೆಗಳು ರಸ್ತೆಯಲ್ಲಿ ಸಂಚಾರಿಸುತ್ತಿರುವಾಗ ಪೆಟ್ರೋಲ್ ಬಂಕ್ ಒಳಗೆ ಬಂದು ಓಡಾಟ ಮಾಡಿ, ಬಳಿಕ ಮತ್ತೆ ರಸ್ತೆಗೆ ತೆರಳಿದ ದೃಶ್ಯ ಸಿಸಿ ಟಿ.ವಿ.ಯಲ್ಲಿ ಸೆರೆಯಾಗಿದೆ. ಇದೇ ವೇಳೆ ರಸ್ತೆಯಲ್ಲಿ ಆನೆ ಬರುವುದನ್ನು ಕಂಡ ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಹೆದರಿ ಸ್ಥಳದಿಂದಲೇ ಪರಾರಿಯಾಗಿದ್ದಾರೆ. ಅಲ್ಲದೇ ಈ ವಿಚಾರವನ್ನು ಅರಣ್ಯ
ಇಲಾಖೆಯವರಿಗೆ ತಿಳಿಸಿದ್ದು, ಅರಣ್ಯ ಇಲಾಖೆಯವರು ಇದೀಗ ಕಾಡಾನೆಗಳನ್ನು ಸೆರೆ ಹಿಡಿಯಲು ಹುಡುಕಾಟ ನಡೆಸುತ್ತಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…