mahadeshwara hill (1)
ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಏ.೨೪ ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರು ಅಧಿಕಾರಿಗಳೊಂದಿಗೆ ಮಹದೇಶ್ವರಬೆಟ್ಟಕ್ಕೆ ತೆರಳಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಸಚಿವ ಸಂಪುಟ ಸಭೆ ನಡೆಯುವ ಮಹದೇಶ್ವರಬೆಟ್ಟದ ದೀಪದ ಗಿರಿ ಒಡ್ಡು, ಹೆಲಿಪ್ಯಾಡ್, ಚೆಕ್ಪೋಸ್ಟ್ ಸ್ಥಳಗಳಿಗೆ ತೆರಳಿ ಪರಿಶೀಲಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಸಚಿವ ಸಂಪುಟ ಸಭೆ ನಡೆಯುವ ದಿನಗಳಲ್ಲಿ ಮಹದೇಶ್ವರಬೆಟ್ಟಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗಬಾರದು. ಬೆಟ್ಟದ ಪೆಟ್ರೋಲ್ ಬಂಕ್ ಬಳಿಯೇ ಪ್ರತ್ಯೇಕವಾಗಿ ಭಕ್ತರು ದೇವಸ್ಥಾನಕ್ಕೆ ತೆರಳಲು ಅವಕಾಶ ಕಲ್ಪಿಸಬೇಕು. ಸೂಕ್ತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಳಿದಂತೆ ವಿಐಪಿಗಳು ಆಗಮಿಸಿದ ವೇಳೆ ರಸ್ತೆಯನ್ನು ಬಂದ್ ಮಾಡಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಅಲ್ಲದೇ ಹೆಲಿಪ್ಯಾಡ್ ಬಳಿಗೆ ತೆರಳಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈಗಾಗಲೇ ಇರುವ ಒಂದು ಹೆಲಿಪ್ಯಾಡ್ ಜೊತೆಗೆ ಮತ್ತೆ ಮೂರು ಹೆಲಿಪ್ಯಾಡ್ಗಳನ್ನು ನಿರ್ಮಾಣ ಮಾಡಬೇಕು. ಸಚಿವ ಸಂಪುಟ ಸಭೆಗೆ ಹಾಜರಾಗುವ ಸಚಿವರು ಹಾಗೂ ಶಾಸಕರ ಆಪ್ತರಿಗೆ ಸಭೆ ನಡೆಯುವ ಸ್ಥಳಕ್ಕೆ ಅವಕಾಶವಿರುವುದಿಲ್ಲ. ಸಭೆಗೆ ಬರುವ ಸಚಿವರು, ಶಾಸಕರನ್ನು ದೀಪದ ಗಿರಿ ಒಡ್ಡುವಿಗೆ ತಲುಪಿಸಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ತಮಿಳುನಾಡು ಚೆಕ್ಪೋಸ್ಟ್ ಹಾಗೂ ಕೊಳ್ಳೇಗಾಲ ಚೆಕ್ಪೋಸ್ಟ್ ವೀಕ್ಷಣೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಎಸ್ಪಿ ಡಾ.ಬಿ.ಟಿ.ಕವಿತಾ,ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ,ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಡಿವೈಎಸ್ಪಿ ಧರ್ಮೇಂದ್ರ ಸೇರಿದಂತೆ ಇತರರಿದ್ದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…