mahadeshwara hill (1)
ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಏ.೨೪ ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರು ಅಧಿಕಾರಿಗಳೊಂದಿಗೆ ಮಹದೇಶ್ವರಬೆಟ್ಟಕ್ಕೆ ತೆರಳಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಸಚಿವ ಸಂಪುಟ ಸಭೆ ನಡೆಯುವ ಮಹದೇಶ್ವರಬೆಟ್ಟದ ದೀಪದ ಗಿರಿ ಒಡ್ಡು, ಹೆಲಿಪ್ಯಾಡ್, ಚೆಕ್ಪೋಸ್ಟ್ ಸ್ಥಳಗಳಿಗೆ ತೆರಳಿ ಪರಿಶೀಲಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಸಚಿವ ಸಂಪುಟ ಸಭೆ ನಡೆಯುವ ದಿನಗಳಲ್ಲಿ ಮಹದೇಶ್ವರಬೆಟ್ಟಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗಬಾರದು. ಬೆಟ್ಟದ ಪೆಟ್ರೋಲ್ ಬಂಕ್ ಬಳಿಯೇ ಪ್ರತ್ಯೇಕವಾಗಿ ಭಕ್ತರು ದೇವಸ್ಥಾನಕ್ಕೆ ತೆರಳಲು ಅವಕಾಶ ಕಲ್ಪಿಸಬೇಕು. ಸೂಕ್ತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಳಿದಂತೆ ವಿಐಪಿಗಳು ಆಗಮಿಸಿದ ವೇಳೆ ರಸ್ತೆಯನ್ನು ಬಂದ್ ಮಾಡಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಅಲ್ಲದೇ ಹೆಲಿಪ್ಯಾಡ್ ಬಳಿಗೆ ತೆರಳಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈಗಾಗಲೇ ಇರುವ ಒಂದು ಹೆಲಿಪ್ಯಾಡ್ ಜೊತೆಗೆ ಮತ್ತೆ ಮೂರು ಹೆಲಿಪ್ಯಾಡ್ಗಳನ್ನು ನಿರ್ಮಾಣ ಮಾಡಬೇಕು. ಸಚಿವ ಸಂಪುಟ ಸಭೆಗೆ ಹಾಜರಾಗುವ ಸಚಿವರು ಹಾಗೂ ಶಾಸಕರ ಆಪ್ತರಿಗೆ ಸಭೆ ನಡೆಯುವ ಸ್ಥಳಕ್ಕೆ ಅವಕಾಶವಿರುವುದಿಲ್ಲ. ಸಭೆಗೆ ಬರುವ ಸಚಿವರು, ಶಾಸಕರನ್ನು ದೀಪದ ಗಿರಿ ಒಡ್ಡುವಿಗೆ ತಲುಪಿಸಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ತಮಿಳುನಾಡು ಚೆಕ್ಪೋಸ್ಟ್ ಹಾಗೂ ಕೊಳ್ಳೇಗಾಲ ಚೆಕ್ಪೋಸ್ಟ್ ವೀಕ್ಷಣೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಎಸ್ಪಿ ಡಾ.ಬಿ.ಟಿ.ಕವಿತಾ,ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ,ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಡಿವೈಎಸ್ಪಿ ಧರ್ಮೇಂದ್ರ ಸೇರಿದಂತೆ ಇತರರಿದ್ದರು.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…