mahadeshwara hill (1)
ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಏ.೨೪ ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರು ಅಧಿಕಾರಿಗಳೊಂದಿಗೆ ಮಹದೇಶ್ವರಬೆಟ್ಟಕ್ಕೆ ತೆರಳಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಸಚಿವ ಸಂಪುಟ ಸಭೆ ನಡೆಯುವ ಮಹದೇಶ್ವರಬೆಟ್ಟದ ದೀಪದ ಗಿರಿ ಒಡ್ಡು, ಹೆಲಿಪ್ಯಾಡ್, ಚೆಕ್ಪೋಸ್ಟ್ ಸ್ಥಳಗಳಿಗೆ ತೆರಳಿ ಪರಿಶೀಲಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಸಚಿವ ಸಂಪುಟ ಸಭೆ ನಡೆಯುವ ದಿನಗಳಲ್ಲಿ ಮಹದೇಶ್ವರಬೆಟ್ಟಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗಬಾರದು. ಬೆಟ್ಟದ ಪೆಟ್ರೋಲ್ ಬಂಕ್ ಬಳಿಯೇ ಪ್ರತ್ಯೇಕವಾಗಿ ಭಕ್ತರು ದೇವಸ್ಥಾನಕ್ಕೆ ತೆರಳಲು ಅವಕಾಶ ಕಲ್ಪಿಸಬೇಕು. ಸೂಕ್ತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಳಿದಂತೆ ವಿಐಪಿಗಳು ಆಗಮಿಸಿದ ವೇಳೆ ರಸ್ತೆಯನ್ನು ಬಂದ್ ಮಾಡಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಅಲ್ಲದೇ ಹೆಲಿಪ್ಯಾಡ್ ಬಳಿಗೆ ತೆರಳಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈಗಾಗಲೇ ಇರುವ ಒಂದು ಹೆಲಿಪ್ಯಾಡ್ ಜೊತೆಗೆ ಮತ್ತೆ ಮೂರು ಹೆಲಿಪ್ಯಾಡ್ಗಳನ್ನು ನಿರ್ಮಾಣ ಮಾಡಬೇಕು. ಸಚಿವ ಸಂಪುಟ ಸಭೆಗೆ ಹಾಜರಾಗುವ ಸಚಿವರು ಹಾಗೂ ಶಾಸಕರ ಆಪ್ತರಿಗೆ ಸಭೆ ನಡೆಯುವ ಸ್ಥಳಕ್ಕೆ ಅವಕಾಶವಿರುವುದಿಲ್ಲ. ಸಭೆಗೆ ಬರುವ ಸಚಿವರು, ಶಾಸಕರನ್ನು ದೀಪದ ಗಿರಿ ಒಡ್ಡುವಿಗೆ ತಲುಪಿಸಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ತಮಿಳುನಾಡು ಚೆಕ್ಪೋಸ್ಟ್ ಹಾಗೂ ಕೊಳ್ಳೇಗಾಲ ಚೆಕ್ಪೋಸ್ಟ್ ವೀಕ್ಷಣೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಎಸ್ಪಿ ಡಾ.ಬಿ.ಟಿ.ಕವಿತಾ,ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ,ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಡಿವೈಎಸ್ಪಿ ಧರ್ಮೇಂದ್ರ ಸೇರಿದಂತೆ ಇತರರಿದ್ದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…