ಚಾಮರಾಜನಗರ

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಪಿಎಚ್.ಡಿ ಮಹಾಪ್ರಬಂಧಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ 2024ನೇ ಸಾಲಿನ ಸಂಸ್ಕೃತ ಗ್ರಂಥ ಪುರಸ್ಕಾರ ಲಭಿಸಿದೆ.

ಶ್ರೀಗಳು ಪ್ರತಿಪಾದಿಸಿರುವ ಅಂಶುಮದಾಗಮ ಸಂಪದನಾತ್ಮಕಮಧ್ಯಯನಮ್’ ಸಂಶೋಧನಾ ಪ್ರಬಂಧಕ್ಕೆ ಕುಂದೂರು ಮಠದ ಪೀಠಾಧಿಪತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿದ್ವಾನ್ ಡಾ.ಶರತ್‌ಚಂದ್ರ ಸ್ವಾಮೀಜಿ ಮಾರ್ಗದರ್ಶನ ಮಾಡಿದ್ದರು. ಈ ಮಹಾಪ್ರಬಂಧದಲ್ಲಿ 84 ಅಧ್ಯಾಯಗಳಿದ್ದು, ಪರಿಪೂರ್ಣವಾಗಿ ದೇಗುಲ, ಪೂಜಾದಿ ಆರಂಭ, ಸಕಲ ಸ್ಥಾಪನ, ಅತ್ಯಾರ್ಥಯಜನ ಪವಿತ್ರ ವಿಧಿ, ಪಂಚಾಮೃತ ವಿಧಿ, ಚೂರ್ಣೋತ್ಸವ ವಿಧಿ, ಪರಸುಪಯ ವಿಧಿ, ಪಾದ್ಯಾದಿವಿಧಿಗಳನ್ನು ಸುವಿಸ್ತಾರವಾಗಿ ವರ್ಣಿತವಾಗಿವೆ. ವಿವಿಧ ದೇವತೆಗಳಿಗೆ ಸಂಬಂಧಿಸಿದ ಅರ್ಚನಾ ಕ್ರಮಗಳ ವಿವರಗಳಿವೆ.

ವಿನಾಯಕ ವ್ರತ, ಮುಖಲಿಂಗಾರ್ಚನ, ಗೌರೀಪವಿತ್ರ ವಿಧಿ, ನಕ್ಷತ್ರ ಪೂಜಾ ವಿಧಿ, ಅರ್ಧನಾರೀಶ್ವರ ಪೂಜಾ ವಿಧಿ, ಚಂದೇಕಾರ್ಚನ ವಿಧಿ ಮಹಾಶಾಂತಿ ವಿಧಿ, ದೇವೀಪೂಜಾ ವಿಧಿ ಇದೆ. ಈ ಅಗಮದಲ್ಲಿ ದೇಗುಲಗಳ ನಿರ್ಮಾಣ, ಮೂರ್ತಿ ನಿರ್ಮಾಣದ ವಿಧಾನ, ಸೇನಾಸ್ತಂಭ, ಅಶ್ವಸ್ತಂಭಗಳ ಸ್ಥಾಪನೆ ಇತ್ಯಾದಿ ವಿವರಗಳಿವೆ. ಜತೆಗೆ ರುದ್ರಾಕ್ರ ಭಸ್ಮಾದಿ ವಿಧಿಗಳು, ಕೃತ್ತಿಕಾದೀಪ ವಿಧಿ, ವಿವಿಧ ಪ್ರಾಯಶ್ಚಿತ್ರಗಳು, ಪ್ರದೋಷ, ಪೂಜಾದಿ ವಿಧಿಗಳನ್ನು ವಿವರಿಸಲಾಗಿದೆ. ದೇಗುಲಗಳ ವಿವಿಧ ಕರ್ಮ ವಿಧಾನ, ಶೈವ ದೇಗುಲಗಳ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡುವ ಸಂಶೋಧಕರಿಗೆ ಇದು ನೆರವಾಗಲಿದೆ.

ಆಂದೋಲನ ಡೆಸ್ಕ್

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

49 mins ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

55 mins ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

1 hour ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

1 hour ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

2 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

2 hours ago