ಚಾಮರಾಜನಗರ

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಪಿಎಚ್.ಡಿ ಮಹಾಪ್ರಬಂಧಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ 2024ನೇ ಸಾಲಿನ ಸಂಸ್ಕೃತ ಗ್ರಂಥ ಪುರಸ್ಕಾರ ಲಭಿಸಿದೆ.

ಶ್ರೀಗಳು ಪ್ರತಿಪಾದಿಸಿರುವ ಅಂಶುಮದಾಗಮ ಸಂಪದನಾತ್ಮಕಮಧ್ಯಯನಮ್’ ಸಂಶೋಧನಾ ಪ್ರಬಂಧಕ್ಕೆ ಕುಂದೂರು ಮಠದ ಪೀಠಾಧಿಪತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿದ್ವಾನ್ ಡಾ.ಶರತ್‌ಚಂದ್ರ ಸ್ವಾಮೀಜಿ ಮಾರ್ಗದರ್ಶನ ಮಾಡಿದ್ದರು. ಈ ಮಹಾಪ್ರಬಂಧದಲ್ಲಿ 84 ಅಧ್ಯಾಯಗಳಿದ್ದು, ಪರಿಪೂರ್ಣವಾಗಿ ದೇಗುಲ, ಪೂಜಾದಿ ಆರಂಭ, ಸಕಲ ಸ್ಥಾಪನ, ಅತ್ಯಾರ್ಥಯಜನ ಪವಿತ್ರ ವಿಧಿ, ಪಂಚಾಮೃತ ವಿಧಿ, ಚೂರ್ಣೋತ್ಸವ ವಿಧಿ, ಪರಸುಪಯ ವಿಧಿ, ಪಾದ್ಯಾದಿವಿಧಿಗಳನ್ನು ಸುವಿಸ್ತಾರವಾಗಿ ವರ್ಣಿತವಾಗಿವೆ. ವಿವಿಧ ದೇವತೆಗಳಿಗೆ ಸಂಬಂಧಿಸಿದ ಅರ್ಚನಾ ಕ್ರಮಗಳ ವಿವರಗಳಿವೆ.

ವಿನಾಯಕ ವ್ರತ, ಮುಖಲಿಂಗಾರ್ಚನ, ಗೌರೀಪವಿತ್ರ ವಿಧಿ, ನಕ್ಷತ್ರ ಪೂಜಾ ವಿಧಿ, ಅರ್ಧನಾರೀಶ್ವರ ಪೂಜಾ ವಿಧಿ, ಚಂದೇಕಾರ್ಚನ ವಿಧಿ ಮಹಾಶಾಂತಿ ವಿಧಿ, ದೇವೀಪೂಜಾ ವಿಧಿ ಇದೆ. ಈ ಅಗಮದಲ್ಲಿ ದೇಗುಲಗಳ ನಿರ್ಮಾಣ, ಮೂರ್ತಿ ನಿರ್ಮಾಣದ ವಿಧಾನ, ಸೇನಾಸ್ತಂಭ, ಅಶ್ವಸ್ತಂಭಗಳ ಸ್ಥಾಪನೆ ಇತ್ಯಾದಿ ವಿವರಗಳಿವೆ. ಜತೆಗೆ ರುದ್ರಾಕ್ರ ಭಸ್ಮಾದಿ ವಿಧಿಗಳು, ಕೃತ್ತಿಕಾದೀಪ ವಿಧಿ, ವಿವಿಧ ಪ್ರಾಯಶ್ಚಿತ್ರಗಳು, ಪ್ರದೋಷ, ಪೂಜಾದಿ ವಿಧಿಗಳನ್ನು ವಿವರಿಸಲಾಗಿದೆ. ದೇಗುಲಗಳ ವಿವಿಧ ಕರ್ಮ ವಿಧಾನ, ಶೈವ ದೇಗುಲಗಳ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡುವ ಸಂಶೋಧಕರಿಗೆ ಇದು ನೆರವಾಗಲಿದೆ.

ಆಂದೋಲನ ಡೆಸ್ಕ್

Recent Posts

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

10 mins ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

34 mins ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

53 mins ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

1 hour ago

ಕಾಡಾನೆ ದಾಳಿಗೆ ನಾಶವಾದ ತೆಂಗು, ಮುಸುಕಿನ ಜೋಳ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…

1 hour ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

3 hours ago