Sattegala | Car-Bike Collision: Two Dead on the Spot
ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಿಂದಾಗಿ ಇಬ್ಬರು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಸತ್ತೇಗಾಲ ಗ್ರಾಮದ ನಟರಾಜು(65) ಹಾಗೂ ಮಹೇಶ್ ಅಲಿಯಾಸ್ ಮಾಯಪ್ಪ(50) ಮೃತ್ತಪಟ್ಟ ಸವಾರರು.
ಇವರಿಬ್ಬರು ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ಕೆಲಸ ಮುಗಿಸಿ ಸತ್ತೇಗಾಲ ಕಡೆಗೆ ತೆರಳುವಾಗ ಕೊಳ್ಳೇಗಾಲದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಿಂದ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದು, ಕಾರು ಸವಾರನ ಸಮೇತ ಹಳ್ಳಕ್ಕೆ ನುಗ್ಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮೃತ ದೇಹವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ತಂದಿರಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…