ಚಾಮರಾಜನಗರ

ಸತತ ಮಳೆಗೆ ಕುಸಿದ ಶಾಲಾ ಕಟ್ಟಡದ ಗೋಡೆ

ಹನೂರು : ಸೋಮವಾರ ಸುರಿದ ಮಳೆಯಿಂದ ಬಂಡಳ್ಳಿ ಗ್ರಾಮದ ಸರ್ಕಾರಿ ಶಾಲೆ ಕಟ್ಟಡದ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ.

ಹನೂರು ಶೈಕ್ಷಣಿಕ ವಲಯದ ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿರುವ ಶಾಲೆಯ ಕಟ್ಟಡದ ಗೋಡೆ ಕುಸಿದು ಬಿದ್ದಿದ್ದು, ಯಾವುದೇ ಅವಘಡ ಸಂಭವಿಸಿಲ್ಲ.

ಹಳೆಯ ಕಟ್ಟಡದ ಗೋಡೆ ಕುಸಿತ :
ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿರುವ ೫ ಕೊಠಡಿಗಳು ಇದೇ ಸ್ಥಿತಿಯಲ್ಲಿದೆ. ಶಾಲೆಯಲ್ಲಿ ರಜೆ ಇದ್ದ ಕಾರಣ ಯಾರೂ ಇಲ್ಲದಿದ್ದರಿಂದ ಅಪಾಯ ತಪ್ಪಿದೆ. ಆದ್ದರಿಂದ ಶಾಲೆಯ ಚಾವಣಿ, ಕಟ್ಟಡಗಳು ಕುಸಿಯುವ ಮುನ್ನ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು, ಮಕ್ಕಳ ಪೋಷಕರು ಒತ್ತಾಯಿಸಿದ್ದಾರೆ.

ಇದನ್ನು ಓದಿ : ರಾಜ್ಯದಲ್ಲಿ ಧಾರಾಕಾರ ಮಳೆ: ಮೂರು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಯಲ್ಲಿರುವ ಹಳೆಯ ಕಟ್ಟಡಗಳನ್ನು ತೆರವುಗೊಳಿಸಬೇಕು. ಮುಂದಿನ ದಿನಗಳಲ್ಲಿ ಮಕ್ಕಳು ಹಳೆಯ ಕಟ್ಟಡದ ಬಳಿ ಹೋಗದಂತೆ ಇಲ್ಲಿನ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಎಚ್ಚರಿಕೆ ವಹಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕ ಗುರುಸ್ವಾಮಿ ಮಾತನಾಡಿ, ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಕಟ್ಟಡವು ಶಿಥಿಲಗೊಂಡಿರುವುದರಿಂದ ಕುಸಿದು ಬಿದ್ದಿದೆ. ರಜಾ ಅವಧಿ ಆಗಿದ್ದರಿಂದ ಯಾವುದೇ ಅವಘಡಗಳು ಸಂಭವಿಸಿಲ್ಲ. ಈ ಶಾಲೆಯಲ್ಲಿ ಐದು ಕಟ್ಟಡಗಳು ತುಂಬಾ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿದ್ದು ಯಾವ ಕ್ಷಣದಲ್ಲಿಯಾದರೂ ಬೀಳುವ ಹಂತದಲ್ಲಿದೆ. ಹಿರಿಯ ಅಧಿಕಾರಿಗಳು ಸೂಕ್ತ ಗಮನ ಹರಿಸಿ ಕಟ್ಟಡ ತೆರವು ಮಾಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago