ಚಾಮರಾಜನಗರ

ಸತತ ಮಳೆಗೆ ಕುಸಿದ ಶಾಲಾ ಕಟ್ಟಡದ ಗೋಡೆ

ಹನೂರು : ಸೋಮವಾರ ಸುರಿದ ಮಳೆಯಿಂದ ಬಂಡಳ್ಳಿ ಗ್ರಾಮದ ಸರ್ಕಾರಿ ಶಾಲೆ ಕಟ್ಟಡದ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ.

ಹನೂರು ಶೈಕ್ಷಣಿಕ ವಲಯದ ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿರುವ ಶಾಲೆಯ ಕಟ್ಟಡದ ಗೋಡೆ ಕುಸಿದು ಬಿದ್ದಿದ್ದು, ಯಾವುದೇ ಅವಘಡ ಸಂಭವಿಸಿಲ್ಲ.

ಹಳೆಯ ಕಟ್ಟಡದ ಗೋಡೆ ಕುಸಿತ :
ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿರುವ ೫ ಕೊಠಡಿಗಳು ಇದೇ ಸ್ಥಿತಿಯಲ್ಲಿದೆ. ಶಾಲೆಯಲ್ಲಿ ರಜೆ ಇದ್ದ ಕಾರಣ ಯಾರೂ ಇಲ್ಲದಿದ್ದರಿಂದ ಅಪಾಯ ತಪ್ಪಿದೆ. ಆದ್ದರಿಂದ ಶಾಲೆಯ ಚಾವಣಿ, ಕಟ್ಟಡಗಳು ಕುಸಿಯುವ ಮುನ್ನ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು, ಮಕ್ಕಳ ಪೋಷಕರು ಒತ್ತಾಯಿಸಿದ್ದಾರೆ.

ಇದನ್ನು ಓದಿ : ರಾಜ್ಯದಲ್ಲಿ ಧಾರಾಕಾರ ಮಳೆ: ಮೂರು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಯಲ್ಲಿರುವ ಹಳೆಯ ಕಟ್ಟಡಗಳನ್ನು ತೆರವುಗೊಳಿಸಬೇಕು. ಮುಂದಿನ ದಿನಗಳಲ್ಲಿ ಮಕ್ಕಳು ಹಳೆಯ ಕಟ್ಟಡದ ಬಳಿ ಹೋಗದಂತೆ ಇಲ್ಲಿನ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಎಚ್ಚರಿಕೆ ವಹಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕ ಗುರುಸ್ವಾಮಿ ಮಾತನಾಡಿ, ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಕಟ್ಟಡವು ಶಿಥಿಲಗೊಂಡಿರುವುದರಿಂದ ಕುಸಿದು ಬಿದ್ದಿದೆ. ರಜಾ ಅವಧಿ ಆಗಿದ್ದರಿಂದ ಯಾವುದೇ ಅವಘಡಗಳು ಸಂಭವಿಸಿಲ್ಲ. ಈ ಶಾಲೆಯಲ್ಲಿ ಐದು ಕಟ್ಟಡಗಳು ತುಂಬಾ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿದ್ದು ಯಾವ ಕ್ಷಣದಲ್ಲಿಯಾದರೂ ಬೀಳುವ ಹಂತದಲ್ಲಿದೆ. ಹಿರಿಯ ಅಧಿಕಾರಿಗಳು ಸೂಕ್ತ ಗಮನ ಹರಿಸಿ ಕಟ್ಟಡ ತೆರವು ಮಾಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

13 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

13 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

13 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

13 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

13 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

13 hours ago