ಹನೂರು : ಕಾಡಾನೆಯೊಂದು ತಡರಾತ್ರಿ ಸರ್ಕಾರಿ ಶಾಲೆಯ ಕಾಂಪೌಂಡ್ ಗೇಟ್, ಕುಡಿಯುವ ನೀರಿನ ಪೈಪ್ಗಳನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ, ಕಬ್ಬಿಣದ ಗೇಟ್ಗೆ ಹಾನಿ ಮಾಡಿದ್ದು ಉಳಿದಂತೆ ಪೈಪ್ಗಳನ್ನು ನಾಶಪಡಿಸಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:-ತರಾತುರಿ ಜಾತಿ ಸಮೀಕ್ಷೆಯಲ್ಲಿ ಅನಗತ್ಯ ಪ್ರಶ್ನೆಗಳು ಏಕೆ : ಆರ್.ಅಶೋಕ ಪ್ರಶ್ನೆ
ಸರ್ಕಾರಿ ಶಾಲೆಯ ಕಟ್ಟಡದ ಮೇಲೆ ಕಾಡಾನೆ ಈ ಹಿಂದೆಯೂ ದಾಳಿ ಮಾಡಿ ಸುತ್ತು ಗೋಡೆ, ಕಬ್ಬಿಣದ ಗೇಟ್ ಮುರಿದಿತ್ತು. ಆದರೂ ಸಂಬಂಧ ಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸೋಲಾರ್ ತಂತಿ ಬೇಲಿ ಅಳವಡಿಸಿ :
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುತ್ತಲೂ ಸೋಲಾರ್ ತಂತಿಯನ್ನು ಅಳವಡಿಸಬೇಕು, ಆನೆ ಕಂದಕಗಳನ್ನು ನಿರ್ಮಾಣ ಮಾಡಬೇಕು. ಆ ಮೂಲಕ ಸಾರ್ವಜನಿಕ ಆಸ್ತಿ-ಆಸ್ತಿಗಳನ್ನು ರಕ್ಷಣೆ ಮಾಡಲು ಸಂಬಂಧಪಟ್ಟ ಇಲಾಖೆಯವರು ಮುತುವರ್ಜಿ ವಹಿಸಬೇಕು. ಇಲ್ಲದಿದ್ದರೆ ಪದೇ ಪದೇ ಕಾಡಾನೆ ದಾಳಿ ಮಾಡುವ ಸಂಭವವಿರುತ್ತದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…