ಹನೂರು : ಕಾಡಾನೆಯೊಂದು ತಡರಾತ್ರಿ ಸರ್ಕಾರಿ ಶಾಲೆಯ ಕಾಂಪೌಂಡ್ ಗೇಟ್, ಕುಡಿಯುವ ನೀರಿನ ಪೈಪ್ಗಳನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ, ಕಬ್ಬಿಣದ ಗೇಟ್ಗೆ ಹಾನಿ ಮಾಡಿದ್ದು ಉಳಿದಂತೆ ಪೈಪ್ಗಳನ್ನು ನಾಶಪಡಿಸಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:-ತರಾತುರಿ ಜಾತಿ ಸಮೀಕ್ಷೆಯಲ್ಲಿ ಅನಗತ್ಯ ಪ್ರಶ್ನೆಗಳು ಏಕೆ : ಆರ್.ಅಶೋಕ ಪ್ರಶ್ನೆ
ಸರ್ಕಾರಿ ಶಾಲೆಯ ಕಟ್ಟಡದ ಮೇಲೆ ಕಾಡಾನೆ ಈ ಹಿಂದೆಯೂ ದಾಳಿ ಮಾಡಿ ಸುತ್ತು ಗೋಡೆ, ಕಬ್ಬಿಣದ ಗೇಟ್ ಮುರಿದಿತ್ತು. ಆದರೂ ಸಂಬಂಧ ಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸೋಲಾರ್ ತಂತಿ ಬೇಲಿ ಅಳವಡಿಸಿ :
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುತ್ತಲೂ ಸೋಲಾರ್ ತಂತಿಯನ್ನು ಅಳವಡಿಸಬೇಕು, ಆನೆ ಕಂದಕಗಳನ್ನು ನಿರ್ಮಾಣ ಮಾಡಬೇಕು. ಆ ಮೂಲಕ ಸಾರ್ವಜನಿಕ ಆಸ್ತಿ-ಆಸ್ತಿಗಳನ್ನು ರಕ್ಷಣೆ ಮಾಡಲು ಸಂಬಂಧಪಟ್ಟ ಇಲಾಖೆಯವರು ಮುತುವರ್ಜಿ ವಹಿಸಬೇಕು. ಇಲ್ಲದಿದ್ದರೆ ಪದೇ ಪದೇ ಕಾಡಾನೆ ದಾಳಿ ಮಾಡುವ ಸಂಭವವಿರುತ್ತದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…