Policeman arrest thief. Cartoon police officer and caught bandit. Policeman escorts criminal to jail. Jailer leads convicted man to prison cell. Lawbreaker punishment. Vector scene of imprisonment
ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ವಸತಿ ಪ್ರೌಢಾಶಾಲೆಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
17 ವರ್ಷದ ಬಾಲಕ ಬುಡಕಟ್ಟು ಸಮುದಾಯದವನಾಗಿದ್ದು, ಈ ಬಾರಿಯ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಬರೆದಿದ್ದ. ಬಾಲಕನ ಕೊನೆಯ ಪರೀಕ್ಷೆ ದಿನ ಸಲಿಂಗಕಾಮಿಯಾಗಿರುವ ಶಿಕ್ಷಕ, ಪರೀಕ್ಷೆಗೆ ಓದಿಕೊಳ್ಳುತ್ತಿದ್ದ ವಿದ್ಯಾರ್ಥಿಯನ್ನು ತನ್ನ ಕೊಠಡಿಗೆ ಕರೆಯಿಸಿ, ಬಾಲಕನಿಗೆ ಮದ್ಯಪಾನ, ದೂಮಪಾನ ಮಾಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕನು ಮೈಸೂರಿನ ಒಡನಾಡಿ ಸಂಸ್ಥೆಯ ನಿರ್ದೇಶಕರಿಗೆ ಏಪ್ರಿಲ್ 12 ರಂದು ದೂರು ನೀಡಿದ್ದಾನೆ. ಒಡನಾಡಿ ನಿರ್ದೇಶಕ ಪರಸುರಾಮ್ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರಿಗೆ ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ಶಿಕ್ಷಕ ಹಿಂದಿನಿಂದಲೂ ಇಂತಹ ಕೃತ್ಯ ಮಾಡಿಕೊಂಡು ಬಂದಿದ್ದಾನೆ ಎನ್ನಲಾಗಿದೆ. ಹಲವು ವರ್ಷಗಳಿಂದ ಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಾ ಬಂದಿದ್ದಾನೆ ಎಂದು ದೂರಲಾಗಿದೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…