Policeman arrest thief. Cartoon police officer and caught bandit. Policeman escorts criminal to jail. Jailer leads convicted man to prison cell. Lawbreaker punishment. Vector scene of imprisonment
ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ವಸತಿ ಪ್ರೌಢಾಶಾಲೆಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
17 ವರ್ಷದ ಬಾಲಕ ಬುಡಕಟ್ಟು ಸಮುದಾಯದವನಾಗಿದ್ದು, ಈ ಬಾರಿಯ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಬರೆದಿದ್ದ. ಬಾಲಕನ ಕೊನೆಯ ಪರೀಕ್ಷೆ ದಿನ ಸಲಿಂಗಕಾಮಿಯಾಗಿರುವ ಶಿಕ್ಷಕ, ಪರೀಕ್ಷೆಗೆ ಓದಿಕೊಳ್ಳುತ್ತಿದ್ದ ವಿದ್ಯಾರ್ಥಿಯನ್ನು ತನ್ನ ಕೊಠಡಿಗೆ ಕರೆಯಿಸಿ, ಬಾಲಕನಿಗೆ ಮದ್ಯಪಾನ, ದೂಮಪಾನ ಮಾಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕನು ಮೈಸೂರಿನ ಒಡನಾಡಿ ಸಂಸ್ಥೆಯ ನಿರ್ದೇಶಕರಿಗೆ ಏಪ್ರಿಲ್ 12 ರಂದು ದೂರು ನೀಡಿದ್ದಾನೆ. ಒಡನಾಡಿ ನಿರ್ದೇಶಕ ಪರಸುರಾಮ್ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರಿಗೆ ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ಶಿಕ್ಷಕ ಹಿಂದಿನಿಂದಲೂ ಇಂತಹ ಕೃತ್ಯ ಮಾಡಿಕೊಂಡು ಬಂದಿದ್ದಾನೆ ಎನ್ನಲಾಗಿದೆ. ಹಲವು ವರ್ಷಗಳಿಂದ ಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಾ ಬಂದಿದ್ದಾನೆ ಎಂದು ದೂರಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…