Mysore
29
scattered clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

ಶಾಸನಕ ರಮೇಶ ಬಾಬು ಬಂಡಿಸಿದ್ದೇಗೌಡ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಶ್ರೀರಂಗಪಟ್ಟಣ : ಮುಸ್ಲಿಮರನ್ನು ಅವಹೇಳನ ಮಾಡಿ, ಅಧಿಕಾರಿಯನ್ನು ನೇಣಿಗೆ ಏರಿಸುವುದಾಗಿ ಹೇಳಿಕೆ ನೀಡಿರುವ ಶ್ರೀರಂಗಪಟ್ಟಣ ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಅವರನ್ನು ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಎದುರು ಜಮಾವಣೆಗೊಂಡ ಎಸ್‌ಡಿಪಿಐ ಕಾರ್ಯಕರ್ತರು, ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಬಿಜೆಪಿ ಹಾಗೂ ಜಾ.ದಳ ಒಂದಾದರು ಎಂಬ ಒಂದೇ ಒಂದು ಕಾರಣಕ್ಕೆ ಮುಸಲ್ಮಾನರು ರಮೇಶ್ ಬಂಡಿಸಿದ್ದೇಗೌಡ ಅವರಿಗೆ ಮತ ಹಾಕಿ ಗೆಲ್ಲಿಸಿದ್ದಾರೆ. ಆದರೆ, ಅವರು ಮುಸಲ್ಮಾನರಿಗೆ ಅವಹೇಳನ ಮಾಡಿ ಕಾಂಗ್ರೆಸ್ ಮಾತ್ರವಲ್ಲದೆ ದೇಶದ ಸಂವಿಧಾನಕ್ಕೆ ಧಕ್ಕೆ ತರುವಂತ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ಮುಸಲ್ಮಾನರು ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದರೆ, ಸಾರ್ವಜನಿಕವಾಗಿ ಅಂತಹವರಿಗೆ ಯಾವುದೇ ದಾಖಲೆಗಳನ್ನು ಮಾಡಿಕೊಟ್ಟರೆ ಅಂತಹವರನ್ನು ನೇಣಿಗೆ ಹಾಕುತ್ತೇನೆಂಬ ಹೇಳಿಕೆ ಸಂವಿಧಾನ ವಿರೋಧಿಯಾಗಿದೆ. ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಕೂಡಲೇ ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸುವುದುರ ಜೊತೆಗೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದರು.

ನಂತರ ಪ್ರತಿಭಟನಾಕಾರರು ಉಪತಹಸಿಲ್ದಾರ್ ಕೆ.ಎನ್.ಚೈತ್ರಾ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Tags:
error: Content is protected !!