ಚಾಮರಾಜನಗರ: ಹನೂರು ತಾಲ್ಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಾಯಿ ಹುಲಿಯ ಹುಡುಕಾಟದಲ್ಲಿದ್ದಾರೆ.
ಎರಡು ಹುಲಿ ಮರಿಗಳು ತಾಯಿ ಹುಲಿ ಹಾಲುಣಿಸದೇ ಬಿಟ್ಟು ಹೋದ ಕಾರಣಕ್ಕೆ ಹಸಿವಿನಿಂದ ಸಾವನ್ನಪ್ಪಿವೆ ಎಂಬ ಬಗ್ಗೆ ಹಾಗೂ ತಾಯಿ ಹುಲಿ ಇರುವಿಕೆಯ ಬಗ್ಗೆ ಕ್ಯಾಮರಾ ಟ್ರಾಪ್ ಆಧರಿಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ತೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಹುಲಿ ಮರಿಗಳು ಮೃತಪಟ್ಟ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಮರಣೋತ್ತರ ಪರೀಕ್ಷೆಯ ಮೂಲಕ ಅವುಗಳ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬದ ಬಳಿಕ ಹುಲಿ ಮರಿಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.





