ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿ ಮಗುವನ್ನು ರಕ್ಷಣೆ ಮಾಡಿದ್ದಾರೆ.
ಮಗುವಿನ ತಂದೆ, ತಾಯಿಯಾದ ಮಂಜುನಾಯಕ, ಸಿಂಧು, ಮಧ್ಯವರ್ತಿ ಶಾಂತಾ, ಅಕ್ರಮವಾಗಿ ಮಗುವನ್ನು ಪಡೆದುಕೊಂಡಿದ್ದ ಜವರಯ್ಯ ಹಾಗೂ ನೇತ್ರಾ ಬಂಧಿತರು.
ಚಾ.ನಗರದ ರಾಮಸಮುದ್ರದಲ್ಲಿ ವಾಸವಿರುವ ಸಿಂಧು ಹಾಗೂ ಮಂಜುನಾಯಕ ದಂಪತಿಗೆ ಕಳೆದ ಜುಲೈ 26ರಂದು ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಹೆಣ್ಣು ಮಗು ಜನಿಸಿತ್ತು. ಬಳಿಕ ದಂಪತಿಯ ಬಳಿ ಮಗು ಇಲ್ಲದಿರುವ ಬಗ್ಗೆ ಸಲ್ಲಿಕೆಯಾದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಷಕರನ್ನು ವಿಚಾರಣೆಗೊಳಪಡಿಸಿದಾಗ ಮಾರಾಟ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಮಗು ಆರೋಗ್ಯಯುತವಾಗಿದ್ದು ಶಿಶು ಅಭಿವೃದ್ಧಿ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೆಚ್ಚುವರಿ ಎಸ್ಪಿ ಎಂ.ಎನ್.ಶಶಿಧರ್, ಡಿವೈಎಸ್ಪಿ ಸ್ನೇಹಾರಾಜ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಎಂ.ಜಗದೀಶ್, ಪಿಎಸ್ಐ ಆರ್.ಮಂಜುನಾಥ್ ಅವರನ್ನೊಳಗೊಂಡ ತಂಡದವರು ಭಾಗವಹಿಸಿದ್ದರು.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…