ಕೊಳ್ಳೇಗಾಲ : ಅಗರ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಮುಡಿಗುಂಡ ಸೇತುವೆಯ ಬಳಿ ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 280 ಗ್ರಾಮ್ ಒಣಗಾಂಜಾವನ್ನು ಭಾನುವಾರ ಜಪ್ತಿ ಮಾಡಿದ್ದಾರೆ. ಬಾಗಳಿ ಗ್ರಾಮದ ಕರಿಯಪ್ಪ ಎನ್ನುವರ ಮಗನಾದ ನಿಂಗರಾಜು ಬಂಧಿತ ಆರೋಪಿ. ಈತ ಸಾರ್ವಜನಿಕರಿಗೆ ಒಣಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಎಸ್ಐ ಕರಿಬಸಪ್ಪ ಹಾಗೂ ಡಿವೈಎಸ್ಪಿ ಅಪರಾಧ ಪತ್ತೆದಳದ ಸಿಬ್ಬಂದಿಗಳು ದಾಳಿ ನಡೆಸಿ ಒಣಗಾಂಜಾ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನು ಓದಿ : ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ
ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಬಂಧಿತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ದಾಳಿಯಲ್ಲಿ ಡಿವೈಎಸ್ಪಿ ಅಪರಾಧ ಪತ್ತೆದಳದ ಎಎಸ್ಐ ತಖೀಉಲ್ಲಾ, ಹೆಚ್.ಸಿ.ಗಳಾದ ರವಿಕುಮಾರ್, ಬಿಳಿಗೌಡ, ವೆಂಕಟೇಶ್, ಕಾನ್ಸಟೇಬಲ್ ಶಿವಕುಮಾರ್, ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಹೆಚ್.ಸಿ ಪರಶಿವಮೂರ್ತಿ, ಕಾನ್ಸಟೇಬಲ್ ಶಿವಕುಮಾರ್, ಶ್ರೀಶೈಲ, ದರ್ಶನ, ಚಾಲಕ ಮಲ್ಲೇಶ್ ಇದ್ದರು
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…